Webdunia - Bharat's app for daily news and videos

Install App

ಒಂದೇ ದಿನ ಮಳೆ, ಚಳಿ, ಬಿಸಿಲು: ಬೆಂಗಳೂರಿಗರಿಗೆ ಕಾಡುತ್ತಿದೆ ಆರೋಗ್ಯ ಸಮಸ್ಯೆ

Krishnaveni K
ಸೋಮವಾರ, 25 ಆಗಸ್ಟ್ 2025 (09:34 IST)
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈಗ ಒಂದೇ ದಿನ ಮಳೆ, ಬಿಸಿಲು, ಚಳಿ ಮೂರೂ ಕಾಲವೂ ಕಂಡುಬರುತ್ತಿದೆ. ಹೀಗಾಗಿ ಜನರಿಗೆ ಆರೋಗ್ಯ ಸಮಸ್ಯೆ ಹೆಚ್ಚಾಗಿದೆ.

ಕಳೆದ ಎರಡು ವಾರಗಳಿಂದ ಬೆಂಗಳೂರಿನಲ್ಲಿ ಶೀತ ಸಂಬಂಧೀ ಖಾಯಿಲೆಗಳು ಹೆಚ್ಚಾಗಿವೆ. ಜೊತೆಗೆ ಹಿಂದಿನ ವಾರ ಭಾರೀ ಮಳೆಯಾಗಿ ಈಗ ಸ್ವಲ್ಪ ಮಳೆ ಬಿಡುವು ನೀಡಿರುವುದರಿಂದ ಸೊಳ್ಳೆಗಳ ಕಾಟದಿಂದ ಡೆಂಗ್ಯೂ ಜ್ವರದ ಭೀತಿ ಶುರುವಾಗಿದೆ.

ವಿಶೇಷವಾಗಿ ಮಕ್ಕಳಲ್ಲಿ ಶೀ, ಕೆಮ್ಮು, ಗಂಟಲು ನೋವು, ವೈರಸ್ ಜ್ವರ, ಉಸಿರಾಟದ ತೊಂದರೆ ಕಂಡುಬರುತ್ತಿದೆ. ಜೊತೆಗೆ ಅಲ್ಲಲ್ಲಿ ಡೆಂಗ್ಯೂ ಜ್ವರವೂ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಅಗತ್ಯವಾಗಿದೆ.

ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆಯಿರಲಿ
ವಾತಾವರಣದ ವೈಪರೀತ್ಯದಿಂದ ಬರುವ ಖಾಯಿಲೆಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕೈಗೊಳ್ಳುವುದು ಸೂಕ್ತ. ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಬಿಸಿ ನೀರು ಆಗಾಗ ಸೇವನೆ ಮಾಡುವುದು, ಬಿಸಿ ನೀರಿನಲ್ಲಿ ದಿನಕ್ಕೊಮ್ಮೆಯಾದರೂ ಬಾಯಿ ಮುಕ್ಕಳಿಸುವುದು, ಬಿಸಿಯಾದ ಆಹಾರ ಸೇವನೆ ಮಾಡುವುದು ಉತ್ತಮ. ಜೊತೆಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವಂತಹ ಸೂಪ್ ನಂತಹ ಆಹಾರವನ್ನು ಹೆಚ್ಚು ಹೆಚ್ಚು ತೆಗೆದುಕೊಳ್ಳಿ. ಶೀತದ ಲಕ್ಷಣಗಳಿದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದ ಹವಾಮಾನ ವರದಿ ಇಲ್ಲಿದೆ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಮುಂದಿನ ಸುದ್ದಿ
Show comments