Webdunia - Bharat's app for daily news and videos

Install App

ಬಿಜೆಪಿಯವರು ಸುಮ್ಮನಿದ್ರೆ ಎಲ್ಲಾ ಗಲಾಟೆಗಳು ನಿಲ್ಲುತ್ತವೆ: ಸಿಎಂ ತಿರುಗೇಟು

Webdunia
ಮಂಗಳವಾರ, 11 ಜುಲೈ 2017 (13:40 IST)
ಮಂಗಳೂರಿನಲ್ಲಿ ಗಲಾಟೆ ಮಾಡುವವರು ಬೇರೆ ಕಡೆಯಿಂದ ಬಂದವರಲ್ಲ. ಗಲಾಟೆ ಮಾಡುವವರು ನಮ್ಮಲ್ಲಿಯೇ ಇದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.
 
ಬಿಜೆಪಿಯವರು ಸುಮ್ಮನಿದ್ರೆ ಎಲ್ಲಾ ಗಲಾಟೆಗಳು ನಿಲ್ಲುತ್ತವೆ. ಬಿಜೆಪಿ ನಾಯಕರು ತಾವು ಮಾಡಿದ ತಪ್ಪುಗಳನ್ನು ಮುಚ್ಚಿಕೊಳ್ಳಲು ಸಚಿವರ ರಾಜೀನಾಮೆ ಬೇಡುವ ನಾಟಕವಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಮಂಗಳೂರು, ದಕ್ಷಿಣ ಕನ್ನಡದಲ್ಲಿ ನಡೆದ ಗಲಭೆಗಳಲ್ಲಿ ಮತೀಯ ಶಕ್ತಿಗಳ ಕೈವಾಡವಿರುವುದು ಕಂಡು ಬಂದಿದೆ. ಅಪರಾಧ ಕೃತ್ಯಗಳಲ್ಲಿ ಯಾವುದೇ ಸಮುದಾಯದವರಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಖಚಿತ ಎಂದರು.
 
ಬಿಜೆಪಿಯವರಿಗೆ ಸಮುದಾಯಗಳನ್ನು ಒಡೆದು ಕೋಮುಗಲಭೆಗಳನ್ನು ಸೃಷ್ಟಿಸುವುದೇ ಕಾಯಕವಾಗಿದೆ ಎಂದು ಅನಿಸುತ್ತದೆ. ಆದರೆ, ಇಂತಹ ಪ್ರಯತ್ನಗಳು ವಿಫಲವಾಗಲಿವೆ. ಪ್ರತಿಯೊಂದು ಸಮುದಾಯದಲ್ಲಿ ಶಾಂತಿ ನೆಲೆಸುವಂತೆ ಮಾಡಿ ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments