Webdunia - Bharat's app for daily news and videos

Install App

ಕಲಬುರಗಿ ಮಹಾನಗರ ಪಾಲಿಕೆ ಗದ್ದುಗೆ ಹೇರಲು ಮೂರು ಪಕ್ಷಗಳು ಕಸರತ್ತು

Webdunia
ಶನಿವಾರ, 11 ಸೆಪ್ಟಂಬರ್ 2021 (21:03 IST)
ಕಲಬುರಗಿ ಮಹಾನಗರ ಪಾಲಿಕೆ ಗದ್ದುಗೆ ಹೇರಲು ಮೂರು ಪಕ್ಷಗಳು ಕಸರತ್ತು ನಡೆಸುತ್ತಿದ್ದು, ಪ್ರತಿಷ್ಠೆಯಾಗಿದೆ. ಇದೀಗ ಸಚಿವ ಆರ್.ಅಶೋಕ್ ಅಖಾಡಕ್ಕೆ ಇಳಿದಿದ್ದಾರೆ.
ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಪಡೆದಿದ್ದರೂ, ಸಂಸತ್ ಸದಸ್ಯ, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಬಲದಿಂದ ಬಿಜೆಪಿಯೂ ಸಮಾನವಾಗಿದೆ. ಜೆಡಿಎಸ್ ಕಿಂಗ್ ಮೇಕರ್ ಆಗಿದ್ದು, ಪಾಲಿಕೆ ಗುದ್ದೆಗೆ ಹೇರಲು ಜೆಡಿಎಸ್ ಬೆಂಬಲ ಅಗರ್ಯವಾಗಿದೆ‌. 
ಇತ್ತೀಚಿಗೆ 
ಜೆಡಿಎಸ್​​ಗೆ ಮೇಯರ್ ಸ್ಥಾನ ಬಿಟ್ಟು ಕೊಡಲು ಕಾಂಗ್ರೆಸ್ ಒಪ್ಪಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಬಿಜೆಪಿ ಪಾಳಯದಲ್ಲಿ ಆತಂಕ ಶುರುವಾಗಿದೆ. ಇದೀಗ ಸಚಿವ  ಆರ್.ಅಶೋಕ್ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ.
ಬಿಡದಿಯ ಫಾರ್ಮ್ ಹೌಸ್​​ಗೆ ತೆರಳಿದ ಆರ್.ಅಶೋಕ್, ಮಾಜಿ ಸಿಎಂ ಎಚ್​ಡಿಕೆ ಜೊತೆ ಕಲಬುರಗಿ ಪಾಲಿಕೆ ಮೈತ್ರಿ ಸಂಬಂಧ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ಮೈತ್ರಿ‌ ಮಾತುಕತೆಯಲ್ಲಿ ಬಿಜೆಪಿ ಯಾವ ಸೂತ್ರ ಮುಂದಿಡುತ್ತೆ ಎಂಬುದು ಇದೀಗ ಕುತೂಹಲ ಕೆರಳಿಸಿದೆ. ಕಾಂಗ್ರೆಸ್​​ನ ಕೆಲ ಕಾರ್ಪೊರೇಟರ್​​ಗಳು ಜೆಡಿಎಸ್​​ಗೆ ಮೇಯರ್ ಸ್ಥಾನ ಬಿಟ್ಟು ಕೊಡಲು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆ ಜೆಡಿಎಸ್​​ಗೇ ಮೇಯರ್ ಸ್ಥಾನ ಬಿಟ್ಟು ಕೊಡುತ್ತಾ ಎಂಬ ಕುತೂಹಲ ಮೂಡಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಎಚ್ ಡಿ ಕೆ, ಸಚಿವ ಆರ್.ಅಶೋಕ್ ಅವರು ನನ್ನ ತೋಟದ ಮನೆಯಲ್ಲಿ ಭೇಟಿಯಾಗಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ನನ್ನೊಂದಿಗೆ ಸುದೀರ್ಘವಾಗಿ ಚರ್ಚಿಸಿದರು. ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಕಲಾಪದ ಬಗ್ಗೆಯೂ ಅವರು ಸಮಾಲೋಚಿಸಿದರು.
ಸೋಮವಾರ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇನೆ. ಅಲ್ಲಿ, ನಮ್ಮ ಶಾಸಕರ ಜತೆ ಎಲ್ಲ ಬೆಳವಣೆಗಗಳ ಬಗ್ಗೆ ಚರ್ಚಿಸಿದ ನಂತರ ಪಕ್ಷದ ಅಭಿಪ್ರಾಯವನ್ನು ತಿಳಿಸಲಾಗುವುದು ಎಂದು ಅವರಿಗೆ ಹೇಳಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments