Select Your Language

Notifications

webdunia
webdunia
webdunia
webdunia

ಎಚ್‌ಡಿಕೆ ತೋಟದಲ್ಲಿ ಬಾಡೂಟ ವ್ಯವಸ್ಥೆ ಆರೋಪ: ಕುರ್ಚಿ, ಶಾಮಿಯಾನ ತೆಗೆದು ಹಾಕಿದ ಅಧಿಕಾರಿಗಳು

ಎಚ್‌ಡಿಕೆ ತೋಟದಲ್ಲಿ ಬಾಡೂಟ ವ್ಯವಸ್ಥೆ ಆರೋಪ: ಕುರ್ಚಿ, ಶಾಮಿಯಾನ ತೆಗೆದು ಹಾಕಿದ ಅಧಿಕಾರಿಗಳು

Sampriya

ರಾಮನಗರ , ಬುಧವಾರ, 10 ಏಪ್ರಿಲ್ 2024 (14:36 IST)
ರಾಮನಗರ: ಎಚ್‌ಡಿಕೆ ತೋಟದ ಮನೆಯಲ್ಲಿ ರಾಜಕೀಯ ಮುಖಂಡರಿಗೆ ಬಾಡೂಟ ವ್ಯವಸ್ಥೆ ಮಾಡಲಾಗಿದೆ ಎಂಬ ಆರೋಪದಡಿಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು ಈ ವೇಳೆ ಹಾಕಿದ್ದ ಶಾಮಿಯಾನ ಹಾಗೂ ಕುರ್ಚಿಗಳನ್ನು ತೆಗೆದು ಹಾಕಿದ್ದಾರೆ.

ತಾಲ್ಲೂಕಿನ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿರುವ ಜೆಡಿಎಸ್ ಅಧ್ಯಕ್ಷ ಹಾಗೂ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ರಾಜಕೀಯ ಮುಖಂಡರಿಗೆ ಬಾಡೂಟದ ವ್ಯವಸ್ಥೆ ಮಾಡಿದ್ದಾರೆಂಬ ಆರೋಪದಡಿಯಲ್ಲಿ ಚುನಾವಣಾಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ವೇಳೆ  ಒಳಗಡೆ ರಾಜಕೀಯ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇರಲಿಲ್ಲ. ರಾಜಕೀಯ ಪಕ್ಷದ ಬಾವುಟ, ಚಿಹ್ನೆ ಹಾಗೂ ಯಾವುದೇ ಸಾಮಗ್ರಿಗಳು ಇರಲಿಲ್ಲ. ಆದರೂ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ರೀತಿ ಊಟದ ವ್ಯವಸ್ಥೆಗೆ ಅವಕಾಶವಿಲ್ಲ ಎಂದು ಸ್ಥಳದಲ್ಲಿದ್ದವರಿಗೆ ಎಚ್ಚರಿಕೆ ನೀಡಿ, ಹಾಕಿದ್ದ ಶಾಮಿಯಾನ, ಕುರ್ಚಿ ಹಾಗೂ ಟೇಬಲ್‌ಗಳನ್ನು ತೆರವುಗೊಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

28 ಕ್ಕೆ 28 ರಲ್ಲೂ ಗೆಲುವು ನಮ್ಮದೇ ಎಂದ ಬಿವೈ ವಿಜಯೇಂದ್ರ