IAS ಅಧಿಕಾರಿ ವಿರುದ್ಧ ಲಂಚದ ಆರೋಪ

Webdunia
ಶುಕ್ರವಾರ, 24 ಫೆಬ್ರವರಿ 2023 (18:43 IST)
ತೋಟಗಾರಿಕೆ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿರೋ ಐಎಎಸ್ ಅಧಿಕಾರಿ ರಾಜೇಂದ್ರ ಕಟಾರಿ ವಿರುದ್ಧ ಲಕ್ಷ ಲಕ್ಷ ಹಣ ಲಂಚ ಬೇಡಿಕೆ ಇಟ್ಟಿರೋ ಗಂಭೀರ ಆರೋಪ ಕೇಳಿ ಬಂದಿದೆ.ವಿಜಯಪುರ ಜಿಲ್ಲೆಯಲ್ಲಿ ತೋಟಗಾರಿಕಾ ಕಂಪನಿ ನೊಂದಣಿಗಾಗಿ ಐದು ಲಕ್ಷಕ್ಕೂ ಹೆಚ್ಚು ಹಣ ಬೇಡಿಕೆ ಇಟ್ಟಿದ್ದಾರೆ ಅಂತಾ ಸುರೇಶ್ ಬೀರಾದರ್ ಎಂಬುವರು ಗಂಭೀರ ಆರೋಪ ಮಾಡಿದ್ದಾರೆ.. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದ ಅವರು ಎಲ್ಲವೂ ಕ್ಲಿಯರ್ ಆಗಿತ್ತು.. ಟೆಕ್ನಿಕಲಿ ಎಲ್ಲಾ ದಾಖಲೆಗಳು ಸರಿ ಇದ್ರೂ ಅಪ್ರೂವಲ್ ಮಾಡೋಕೆ ಲಕ್ಷಾಂತರ ರೂಪಾಯಿ ಹಣ ಕೇಳ್ತಿದ್ದಾರೆ ಅಂತಾ ಲೋಕಾಯುಕ್ತಕ್ಕೆ ದೂರು ನೀಡಿದ್ರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು ಇಂದು ಎಮ್ ಎಸ್ ಬಿಲ್ಡಿಂಗ್ ಬಳಿ ಇರೋ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಚೇರಿ, ಮತ್ತು ಲಾಲ್ ಬಾಗ್ ನಲ್ಲಿರೋ ತೋಟಗಾರಿಕಾ ಇಲಾಖೆ ನಿರ್ದೇಶಕರು ಮತ್ತು ಜಂಟಿ ನಿರ್ದೇಶಕರ ಕಚೇರಿ ಸೇರಿ ಮೂರು ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ರು.

ಇನ್ನು ಕಳೆದ ಆರು ತಿಂಗಳಿಂದಲೂ ಆಟ ಆಡಿಸ್ತಿರೋ ಐಎಎಸ್ ಅಧಿಕಾರಿ ಕಟಾರಿ ಮತ್ತು ಇಲಾಖೆ ಅಧಿಕಾರಿಗಳು ಹಣ ಕೊಡೋವರ್ಗೂ ಕಂಪನಿಗೆ ಅಪ್ರೂವಲ್ ಮಾಡಲ್ಲ ಅಂತಿದ್ದಾರೆ ಅಂತಾ ನೇರವಾಗಿ ಸುರೇಶ್ ಗಂಭೀರ ಆರೋಪ ಮಾಡಿದ್ರು.. ಅಲ್ದೆ ಕಳೆದ ವಾರ ಫ್ಯಾಮಿಲಿ ಸಮೇತ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ರೂ ಕರುಣೆ ಬರಲಿಲ್ಲ. ಈಗಾಗಲೇ ಐದು ಕೋಟಿ ಇನ್ವೆಷ್ಟ್ ಮಾಡಿ ಕಂಪನಿ ಓಪನ್ ಮಾಡಿದ್ದೀನಿ. ಅಪ್ರೂವಲ್ ಮಾಡೋಕೆ ಈ ರೀತಿ ಲಕ್ಷ ಲಕ್ಷ ಹಣ ಕೇಳಿ ನಮಗೆ  ಮತ್ತಷ್ಟು ಕಷ್ಟ ಕೊಡ್ತಿದ್ದಾರೆ ಅಂತಾ ಸುರೇಶ್ ಬೇಸರ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments