Webdunia - Bharat's app for daily news and videos

Install App

ಚುನಾವಣಾ ಬಾಂಡ್ ನೆಪದಲ್ಲಿ ಸುಲಿಗೆ ಆರೋಪ: ಬಿವೈ ವಿಜಯೇಂದ್ರಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್‌

Sampriya
ಮಂಗಳವಾರ, 17 ಡಿಸೆಂಬರ್ 2024 (19:21 IST)
ಬೆಂಗಳೂರು: ಚುನಾವಣಾ ಬಾಂಡ್ ಗಳ ನೆಪದಲ್ಲಿ ಹಣ ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ನ್ನು ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಈ ಮೂಲಕ ಬಿವೈ ವಿಜಯೇಂಧ್ರಗೆ ಬಿಗ್‌ ರಿಲೀಫ್ ಸಿಕ್ಕಿದೆ.

ನಗರದ ಸಾಮಾಜಿಕ ಹೋರಾಟಗಾರ ಆದರ್ಶ ಆರ್ ಅಯ್ಯರ್ ಎಂಬುವರು ದಾಖಲಿಸಿದ್ದ ದೂರಿನ ಆಧಾರದ ಮೇಲೆ ಬೆಂಗಳೂರು ಪೊಲೀಸರು ಸೆಪ್ಟೆಂಬರ್ ನಲ್ಲಿ ಎಫ್ ಐಆರ್ ದಾಖಲಿಸಿದ್ದರು. ಚುನಾವಣಾ ಬಾಂಡ್‌ಗಳ ನೆಪದಲ್ಲಿ ಸಂಪೂರ್ಣ ಸುಲಿಗೆ ದಂಧೆಯಲ್ಲಿ ವಿವಿಧ ಹಂತದ ಬಿಜೆಪಿ ನಾಯಕರು ಕೈ ಜೋಡಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದರು. ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 384 (ಸುಲಿಗೆ), 120 ಬಿ (ಅಪರಾಧದ ಪಿತೂರಿ) ಮತ್ತು 34 ಸಾಮಾನ್ಯ ಉದ್ದೇಶದಡಿ ಪ್ರಕರಣ ದಾಖಲಿಸಲಾಗಿತ್ತು.

 ಇದರೊಂದಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಇಡಿ ಅಧಿಕಾರಿಗಳು ಹಾಗೂ ಬಿಜೆಪಿ ರಾಷ್ಟ್ರ ರಾಜ್ಯ ಮಟ್ಟದ ಪದಾಧಿಕಾರಿಗಳ ವಿರುದ್ದವೂ ಎಫ್ಐಆರ್ ದಾಖಲಾಗಿತ್ತು.

ಆ ಸಂದರ್ಭದಲ್ಲಿ ವಿಜಯೇಂದ್ರ ಬಿಜೆಪಿ ಉಪಾಧ್ಯಕ್ಷರಾಗಿದ್ದರೆ ಮತ್ತೋರ್ವ ಆರೋಪಿ ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು. ಕಟೀಲ್ ವಿರುದ್ಧದ ಪ್ರಕರಣವನ್ನು ಕೋರ್ಟ್ ಡಿಸೆಂಬರ್ 3 ರಂದು ರದ್ದುಗೊಳಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments