Publish Date: Sat, 10 Jun 2023 (19:33 IST)
Updated Date: Sat, 10 Jun 2023 (19:08 IST)
ಸರ್ಕಾರಿ ಜಾಗದಲ್ಲಿ ಅಂಗಡಿ ಹಾಕಿಕೊಂಡವರ ಮೇಲೆ ಕಾಂಗ್ರೆಸ್ ಮುಖಂಡ ಬಾಪುಗೌಡ ಪಾಟೀಲ್ ಹಾಗೂ ಬೆಂಬಲಿಗರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಘಟನೆ ನಡೆದಿದೆ. ಬಾಪುಗೌಡ ಪಾಟೀಲ್ ಬೆಂಬಲಿಗರು ಮಲ್ಲಿಕಾರ್ಜುನ ಬಾಟಗಿ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿದ ಬಾಪುಗೌಡ ಪಾಟೀಲ್ ಸರ್ಕಾರಿ ಜಾಗದ ಬಳಿ ಎರಡು ಎಕರೆ ಜಮೀನು ಖರೀದಿಸಿದ್ದಾರೆ. ಸ್ಥಳೀಯರು ಸರ್ಕಾರಿ ಜಾಗದಲ್ಲಿ ಮಲ್ಲಿಕಾರ್ಜುನ ಬಟಗಿ ಸೇರಿದಂತೆ ಹಲವರು ಅಂಗಡಿ, ಖಾನಾವಳಿ ಹಾಕಿಕೊಂಡು ಉಪಜೀವನ ನಡೆಸುತ್ತಿದ್ದಾರೆ. ಆದರೆ ಬಾಪುಗೌಡ ಪಾಟೀಲ್ ಮೊದಲಿಗೆ ಮಲ್ಲಿಕಾರ್ಜುನ ಬಟಗಿ ಅವರನ್ನು ಟಾರ್ಗೆಟ್ ಮಾಡಿ ಅಂಗಡಿ ಕಿತ್ತು ಹಾಕಿರೋ ಆರೋಪ ಕೇಳಿಬಂದಿದೆ.