Publish Date: Mon, 11 Apr 2022 (19:18 IST)
Updated Date: Mon, 11 Apr 2022 (19:20 IST)
ಕಲಬುರಗಿಯಲ್ಲಿ ಶ್ರೀರಾಮನವಮಿ ಆಚರಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ.. ಆಳಂದ ತಾಲೂಕಿನ ಕಡಗಂಚಿಯಲ್ಲಿರೋ ವಿವಿ ಆವರಣದಲ್ಲಿ ನಿನ್ನೆ ರಾಮನವಮಿ ಆಚರಿಸಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆಯಂತೆ..ವಿದ್ಯಾರ್ಥಿಗಳಾದ ವಿಶ್ವನಾಥ, ನರೇಂದ್ರಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ..ಇನ್ನು ಈ ಘಟನೆ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ ನಡೆಸಲಾಯ್ತು.