Select Your Language

Notifications

webdunia
webdunia
webdunia
webdunia

ಬಿಜೆಪಿ ಅಭ್ಯರ್ಥಿಯಿಂದ ಮತದಾರರಿಗೆ ಹಣ ಹಂಚಿಕೆ ಆರೋಪ

ಬಿಜೆಪಿ ಅಭ್ಯರ್ಥಿಯಿಂದ ಮತದಾರರಿಗೆ ಹಣ ಹಂಚಿಕೆ ಆರೋಪ
ಬೆಳಗಾವಿ , ಶುಕ್ರವಾರ, 21 ಏಪ್ರಿಲ್ 2023 (12:03 IST)
ಬೆಳಗಾವಿ : ಮತದಾರರಿಗೆ ಹಂಚುವ ಸಲುವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 1.54 ಕೋಟಿ ರೂ. ಹಣವನ್ನು ಚುನಾವಣಾ ಅಧಿಕಾರಿಗಳು ಜಪ್ತಿಪಡಿಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಮದುರ್ಗ ಬಿಜೆಪಿ ಅಭ್ಯರ್ಥಿ ಚಿಕ್ಕರೇವಣ್ಣ ಬುಧವಾರ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ. ಅವರ ಬೆಂಬಲಿಗರು ಮತದಾರರಿಗೆ ಹಣ ಹಂಚುತ್ತಿದ್ದಾರೆ ಎಂದು ಆರೋಪ ಹೊರಿಸಲಾಗಿತ್ತು. ರಾಮದುರ್ಗ ತುರನೂರು ಬಳಿ ಹಣ ಹಂಚಿಕೆ ಮಾಡುತ್ತಿದ್ದು, ಹಣ ಹಂಚುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. 

ಈ ಖಚಿತ ಮಾಹಿತಿಯ ಮೇರೆಗೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದು, ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 1.54 ಕೋಟಿ ರೂ. ಹಣವನ್ನು ಜಪ್ತಿ ಮಾಡಿದ್ದಾರೆ. ಅಲ್ಲದೇ ಕಾರು ಚಾಲಕನನ್ನು ಬಂಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಕಾಲದಲ್ಲಿ ಪಿಎಫ್ಐ ಜಾಲ ವ್ಯಾಪಕವಾಗಿ ಹಬ್ಬಿತ್ತು : ಅರುಣ್ ಸಿಂಗ್