Publish Date: Wed, 07 Sep 2022 (08:56 IST)
Updated Date: Wed, 07 Sep 2022 (08:58 IST)
ತುಮಕೂರು/ವಿಜಯಪುರ : ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಕಾಲದಲ್ಲಿ ಶಿಕ್ಷಕರ ನೇಮಕಾತಿ ಅಕ್ರಮ ಆಗಿರುವ ಆರೋಪದಲ್ಲಿ ಇದೀಗ ಸಿಐಡಿ ಅಧಿಕಾರಿಗಳು 11 ಜನರನ್ನು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆಯ 10 ಜನ ಹಾಗೂ ವಿಜಯಪುರದ ಒಬ್ಬ ಶಿಕ್ಷಕನನ್ನು ಬಂಧಿಸಲಾಗಿದ್ದು, ಅವರನ್ನು ಬುಧವಾರ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಆರೋಪಿಗಳಲ್ಲಿ ತುಮಕೂರಿನ 10 ಜನ ಹಾಗೂ ವಿಜಯಪುರದ ಓರ್ವ ಶಿಕ್ಷಕ ಸಿಐಡಿ ಅಧಿಕಾರಿಗಳ ಕೈಯಲ್ಲಿ ಸೆರೆಯಾಗಿದ್ದಾರೆ.
ಶಮೀನಾಜ್, ರಾಜೇಶ್ವರಿ ಜಗ್ಲಿ, ಕಮಲಾ, ನಾಗರತ್ನ, ದಿನೇಶ್, ನವೀನ್ ಹನುಮಗೌಡ, ನವೀನ್ ಕುಮಾರ್, ದೇವೇಂದ್ರ ನಾಯ್ಕ್, ಹರೀಶ್ ಆರ್, ಪ್ರಸನ್ನ ಬಿ.ಎಂ ಹಾಗೂ ಮಹೇಶ ಶ್ರೀಮಂತ ಸೂಸಲಾಡಿ ಬಂಧಿತ ಆರೋಪಿಗಳು.