Webdunia - Bharat's app for daily news and videos

Install App

ಸಂಘದಿಂದ ಹಣ ದುರುಪಯೋಗ ಆರೋಪ

Webdunia
ಬುಧವಾರ, 21 ಜೂನ್ 2023 (14:00 IST)
ಚಾಮರಾಜನಗರದ ಮಲೆಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸದಸ್ಯರ ಚಿನ್ನಾಭರಣದ ಸಾಲ ನೀಡುವ ಮೂಲಕ ಸುಮಾರು 3 ಕೋಟಿ ರೂ.ಗಳಿಗೂ ಹೆಚ್ಚು ವಂಚನೆ ಮಾಡಿದ್ದಾರೆಂದು ಆರೋಪಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಆಶ್ರಯದಲ್ಲಿ ಸಂಘದ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಚಾಮರಾಜನಗರ ತಾಲೂಕಿನ ಮಲೆಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಲ್.ಶಿವಪ್ಪ, ಕಾರ್ಯದರ್ಶಿ ನಾಗೇಂದ್ರ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರು ಶೂನ್ಯ ಬಡ್ಡಿ ದರದಲ್ಲಿ ರೈತರ ಚಿನ್ನಾಭರಣದ ಮೇಲೆ ಸಾಲ ನೀಡುತ್ತೇವೆ ಎಂದು ಚಿನ್ನಾರಭರಣಗಳನ್ನು ಪಡೆದುಕೊಂಡು ಸಾಲ ನೀಡಿದ್ದು, ಮತ್ತೆ ಹಣ ಕಟ್ಟಿಸಿಕೊಂಡು ನಮ್ಮಚಿನ್ನಾಭರಣವನ್ನು ವಾಪಸ್ ನೀಡಲು ಹಿಂದೇಟು ಹಾಕಿದ್ದಾರೆ. ನಮ್ಮ ಚಿನ್ನಾಭರಣಗಳನ್ನು ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಆಡಳಿತ ಮಂಡಲಿ ಸದಸ್ಯರು ಇತರೆ ಖಾಸಗಿ ಬ್ಯಾಂಕುಗಳನ್ನು ಇಟ್ಟು, ಹೆಚ್ಚಿನ ಹಣ ಪಡೆದು, ನಮ್ಮನ್ನು ವಂಚನೆ ಮಾಡಿದ್ದಾರೆ. ಈ ಕೂಡಲೇ ಇವರ ವಿರುದ್ದ ಕ್ರಿಮಿನಾಲ್ ಪ್ರಕರಣ ದಾಖಲು ಮಾಡಿ ನಮ್ಮ ಚಿನ್ನಾಭರಣವನ್ನು ಬಿಡಿಸಿಕೊಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments