Webdunia - Bharat's app for daily news and videos

Install App

ಬೆಂಗ್ಳೂರಿನಲ್ಲಿ ನಾಯಿ ಮಾಂಸ ಮಾರಾಟ ಆರೋಪ: ಮಾಂಸದ ಮಾದರಿ ಸಂಗ್ರಹಿಸಿದ ಆಹಾರ ಇಲಾಖೆ

Sampriya
ಶನಿವಾರ, 27 ಜುಲೈ 2024 (18:20 IST)
Photo Courtesy X
ಬೆಂಗಳೂರು: ಸದ್ಯ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ನಾಯಿ ಮಾಂಸ ಮಾರಾಟ ಆರೋಪ ಪ್ರಕರಣ ಸಂಬಂಧ  ಇಂದು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಮಾಂಸದ ಮಾದರಿಗಳನ್ನು ಸಂಗ್ರಹಿಸಿದೆ.  

ಬೆಂಗಳೂರು ರೈಲು ನಿಲ್ದಾಣದಲ್ಲಿ ಭಾರೀ ಪ್ರಮಾಣದ ಮಾಂಸ ಸಾಗಾಟ ಪತ್ತೆಯಾಗಿದ್ದು, ಅದರಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಹಿಂದೂಪರ ಸಂಘಟನೆಯ ಪುನೀತ್ ಕೆರೆಹಳ್ಳಿ ಅವರು ಆರೋಪ ಮಾಡಿದ್ದಾರೆ. ಆದರೆ ಮಾಂಸಾ ಸಾಗಾಟ ಮಾಡಿದ ವ್ಯಾಪಾರಿ ಅಬ್ದುಲ್ ರಜಾಕ್ ಅವರು ಈ ಆರೋಪವನ್ನು ತಳ್ಳಿ ಹಾಕಿದ್ದು, ಇದು ಕುರಿ ಮಾಂಸ ಎಂದು ಹೇಳಿದ್ದಾರೆ.

ಈ ಪ್ರಕರಣ ಸಂಬಂಧ ಇದೀಗ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಪಾರ್ಸೆಗಳಲ್ಲಿ ಪತ್ತೆಯಾದ ಪ್ರಾಣಿಗಳ ಮಾಂಸದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿದೆ. ಇದರ ವರದಿಯಲ್ಲಿ ಸತ್ಯಾಂಶ ಹೊರಬೀಳಲಿದೆ. ಇನ್ನೂ ಪ್ರಕರಣದ ಸಂಬಂಧ ವರಧಿ ಬಂದ್ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು  ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಕಮಿಷನರೇಟ್ ತಿಳಿಸಿದೆ.

ಪ್ರಕರಣದ ಹಿನ್ನೆಲೆ: ಶುಕ್ರವಾರ ರಾತ್ರಿ ಜೈಪುರದಿಂದ ಬೆಂಗಳೂರಿಗೆ ರೈಲಿನ ಮೂಲಕ ಬಂದ ಮೂರು ಟನ್ ತೂಕದ ಮಾಂಸದಲ್ಲಿ ನಾಯಿ ಮಾಂಸವನ್ನು ಹಾಕಿ ಸಾಗಾಟ ಮಾಡಲಾಗುತ್ತಿದೆ ಎಂದು ಪುನೀತ್ ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ಕೆಲವು ಹಿಂದೂಪರ ಕಾರ್ಯಕರ್ತರು ಗಂಭೀರ ಆರೋಪ ಮಾಡಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments