Webdunia - Bharat's app for daily news and videos

Install App

ಸಮಿಶ್ರ ಸರ್ಕಾರದ ಮೊದಲ‌ ಬಜೆಟ್: ನಿರೀಕ್ಷೆ ಅಪಾರ

Webdunia
ಬುಧವಾರ, 4 ಜುಲೈ 2018 (17:16 IST)
ಸಮಿಶ್ರ ಸರ್ಕಾರದ ಮೊದಲ‌ ಬಜೆಟ್ ಮೇಲೆ ಮುಂಬೈ ಕರ್ನಾಟಕದ ಜನತೆ ಸಾಕಷ್ಟು‌ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನ ಹಲವು ಯೋಜನೆಗಳು ಇನ್ನು ಅನುಷ್ಠಾನಗೊಂಡಿಲ್ಲ. ಇದರ ಮಧ್ಯೆ ಸಮ್ಮಿಶ್ರ ಸರ್ಕಾರ ನಾಳೆ ಮಂಡಿಸಲಿರುವ ಬಜೆಟ್ ಮೇಲೆ ಮುಂಬೈ ಕರ್ನಾಟಕ ಜನತೆ ಬೆಟ್ಟದಷ್ಟು‌ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಮುಂಬೈ ಕರ್ನಾಟಕದ ಹೆಬ್ಬಾಗಿಲಾಗರುವ ಹುಬ್ಬಳ್ಳಿ -ಧಾರವಾಡದ ಬಗ್ಗೆ ಈ ಬಾರಿಯ ಬಜೆಟ್ ನಲ್ಲಿ ಬಂಪರ್ ಕೊಡುಗೆ ನೀಡುವ ನಿರೀಕ್ಷೆ ಇದೆ. ನೆನೆಗುದಿದೆ ಬಿದ್ದಿರುವ ಹುಬ್ಬಳ್ಳಿ ಅಂಕೋಲಾ ರೈಲು ಯೋಜನೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವ ಸಂಭವಿದೆ. ನೀರಾವರಿ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ ಯೋಜನೆ ಯೋಜನೆಗೆ ಹೆಚ್ಚಿನ ಅನುದಾನ ಹಾಗೂ‌ ಮೇಲ್ದರ್ಜೆಗೇರಿಸುವ ನಿರೀಕ್ಷೆ ಹೊಂದಿದ್ದಾರೆ. ಉತ್ತರ ಕರ್ನಾಟಕ ಬಹುದಿನಗಳಿಂದ ಹೋರಾಟ ಮಾಡುತ್ತ ಬಂದಿರುವ ಮಹದಾಯಿ ಯೋಜನೆಗೆ ಈಗಲೇ ಅನುದಾನ‌ ಒದಗಿಸಬೇಕು. ಬೆಣ್ಣೆ ಹಳ್ಳದಲ್ಲಿ‌ ಉಂಟಾಗುವ ಪ್ರವಾಹ ತಡೆ ಹಾಗೂ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಂಡು ಬಜೆಟ್ ನಲ್ಲಿ ಅನುದಾನ ಮೀಸಲಿಡಬೇಕು ಎಂಬ ಬೇಡಿಕೆ ಬಹುದಿನಳಿಂದ ಕೇಳಿ ಬರುತ್ತಿದೆ. ಇದರ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪವಾಗುವ ನಿರೀಕ್ಷೆ ಇದೆ.

ಬೆಳಗಾವಿ ಗಡಿ ಭಾಗದಲ್ಲಿ ಕನ್ನಡ ಶಾಲೆಗಳ ಅಭಿವೃದ್ದಿಗಾಗಿ ಹಣ ಮೀಸಲಿಡಬೇಕು. ಮುಂಬೈ ಕರ್ನಾಟಕದಲ್ಲಿನ ನೂತನ ತಾಲೂಕುಗಳಿಗೆ ಮೂಲಭೂತ ಸೌಲಭ್ಯ ಹಾಗೂ ಸಿಬ್ಬಂದಿ ಕೊರತೆ ಇದ್ದು, ಬಜೆಟ್ ನಲ್ಲಿ ನೂತನ‌ ತಾಲೂಕುಗಳಿಗೆ ವಿಶೇಷ ಅನುದಾನ‌ ನೀಡುವ ನಿರೀಕ್ಷೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

ಮುಂದಿನ ಸುದ್ದಿ
Show comments