Publish Date: Fri, 14 Jun 2019 (14:21 IST)
Updated Date: Fri, 14 Jun 2019 (14:22 IST)
ಇವತ್ತು ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮಾಡುತ್ತಿಲ್ಲ. ಬದಲಾಗಿ ಸರ್ಕಾರದ ಶವಪೆಟ್ಟಿಗೆಗೆ ಕೊನೆ ಮೊಳೆ ಹೊಡೆಯುತ್ತಿದೆ. ಹೀಗಂತ ಬಿಜೆಪಿ ಲೇವಡಿ ಮಾಡಿದೆ.
ಸಿದ್ದರಾಮಯ್ಯ ಮೌನವಾಗಿರುವ ಕುರಿತು ವಿಧಾನಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಲು ಸಿದ್ಧ ಇದ್ದಾರೆ. ಅವರಿಗೆ ಮೈತ್ರಿ ಮುಂದುವರೆಸಲು ಇಷ್ಟ ಇಲ್ಲ. ಇದೇ ಸಿದ್ದರಾಮಯ್ಯ ಮೌನ ಆಗಿರೋದಕ್ಕೆ ಕಾರಣ ಅಂತ ಹೇಳಿದ್ದಾರೆ.
ವಿಧಾನಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿಕೆ ನೀಡಿದ್ದು, ಇವತ್ತು ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮಾಡುತ್ತಿಲ್ಲ. ಬದಲಾಗಿ ರಾಜ್ಯ ಸರ್ಕಾರದ ಶವಪೆಟ್ಟಿಗೆಗೆ ಕೊನೆ ಮೊಳೆ ಹೊಡೆಯುತ್ತಿದೆ. ನಿಮಗೆ ತಾಕತ್ತಿದ್ದರೆ ಐಎಂಎ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ನನ್ನು ಬಂಧಿಸಿ ಇಲ್ಲವೇ ರಾಜೀನಾಮೆ ಕೊಟ್ಡು ಹೋಗಿ ಎಂದು ಸರಕಾರಕ್ಕೆ ಒತ್ತಾಯ ಮಾಡಿದ್ರು.