Webdunia - Bharat's app for daily news and videos

Install App

ಕಾಂಗ್ರೆಸ್ – ಜೆಡಿಎಸ್ ಸರಕಾರದಲ್ಲಿ ಮೈತ್ರಿ: ಮಂಡ್ಯದಲ್ಲಿ ಕುಸ್ತಿ!

Webdunia
ಶುಕ್ರವಾರ, 11 ಜನವರಿ 2019 (13:54 IST)
ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರ ಆಡಳಿತದಲ್ಲಿ ದೋಸ್ತಿ ನಡೆಸುತ್ತಿದ್ದರೆ, ಮಂಡ್ಯದಲ್ಲಿ ಮಾತ್ರ ಉಭಯ ಪಕ್ಷಗಳ ನಾಯಕರು ಈಗಲೂ ಕುಸ್ತಿಯನ್ನೇ ಮುಂದುವರಿಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಶಂಕುಸ್ಥಾಪನೆ ಕಲ್ಲಿಗಾಗಿ ಹಾಲಿ-ಮಾಜಿ ಶಾಸಕರ ನಡುವೆ ರಾಜಕೀಯ ಶುರುವಾಗಿದೆ. ರಾಜಕೀಯ ನಾಯಕರ ಪಾಲಿಟಿಕ್ಸ್ ಫೈಟ್ಗೆ ಹೆದರಿದ ಪೊಲೀಸರು ಶಂಕುಸ್ಥಾಪನೆ ಕಲ್ಲುಗಳಿಗೆ ಬಂದೋಬಸ್ತ್ ಮಾಡಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ಅಂಬೇಡ್ಕರ್ ಭವಣ ನಿರ್ಮಾಣ ಮಾಡಲಾಗುತ್ತಿದೆ. 2012 ರಲ್ಲಿ ಮಾಜಿ ಶಾಸಕ ನರೇಂದ್ರಸ್ವಾಮಿ ಶಂಕುಸ್ಥಾಪನೆ ನೆರವೇರಿಸಿದ್ದರು. 2014ರಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಭವನ ಉದ್ಘಾಟಿಸಿದ್ದರು. ಆದರೆ ಕಳೆದ ಡಿಸೆಂಬರ್ನಲ್ಲಿ ರಾತ್ರೋರಾತ್ರಿ ಭವನದಲ್ಲಿ ಮತ್ತೊಂದು ಕಲ್ಲು ಪ್ರತ್ಯಕ್ಷವಾಗಿದ್ದು ಅದ್ರಲ್ಲಿ 2007 ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಶಂಕುಸ್ಥಾಪನೆ ಅಂತ ಬರೆಯಲಾಗಿದೆ.  ಇದು ಮಾಜಿ ಶಾಸಕ ನರೇಂದ್ರಸ್ವಾಮಿ ಬೆಂಬಲಿಗರನ್ನು ಕೆರಳಸಿದ್ದು, ಕೂಡಲೇ ಬೋಗಸ್ ಶಿಲಾನ್ಯಾಸದ ಕಲ್ಲನ್ನು ತೆಗೆಸಬೇಕೆಂದು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆ ವಿರುದ್ಧ ಹರಿಹಾಯ್ದಿರುವ ಹಾಲಿ ಶಾಸಕ ಡಾ.ಅನ್ನದಾನಿ, 2007 ಏಪ್ರಿಲ್ನಲ್ಲಿ ಅಂದಿನ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶಂಕುಸ್ಥಾಪನೆ ಮಾಡಿದ್ದರು. ಅಂದು 58 ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಮಾಡಿದ್ದರು. ಆದರೆ ನರೇಂದ್ರಸ್ವಾಮಿ ಶಾಸಕರಾಗಿದ್ದ 10 ವರ್ಷಗಳಲ್ಲಿ ನೆರವೇರಿಸಿದ್ದ ಶಂಕುಸ್ಥಾಪನಾ ಕಲ್ಲುಗಳು ನಾಪತ್ತೆಯಾಗಿವೆ ಎಂದಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments