Webdunia - Bharat's app for daily news and videos

Install App

ವಿಧಾನಸೌಧದಲ್ಲಿ ಮೈತ್ರಿ- ಸಕ್ಕರೆ ನಾಡಲ್ಲಿ ಕುಸ್ತಿ....!

Webdunia
ಶುಕ್ರವಾರ, 14 ಡಿಸೆಂಬರ್ 2018 (20:37 IST)
ಮಂಡ್ಯದಲ್ಲಿ   ಜೆಡಿಎಸ್ - ಕಾಂಗ್ರೆಸ್ ಜಟಾಪಟಿ ಮತ್ತೆ ಮುಂದುವರಿದಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ಜಟಾಪಟಿ ಮಾಡಿಕೊಂಡಿದ್ದಾರೆ.

ಮಂಡ್ಯದಲ್ಲಿ ಮತ್ತೆ  ಜೆಡಿಎಸ್ - ಕೈ ಕಾರ್ಯಕರ್ತರ ಜಟಾಪಟಿ ಶುರುವಾಗಿದೆ. K.R.ಪೇಟೆ ಕ್ಷೇತ್ರದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ - ಕೈ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.
ಜೆಡಿಎಸ್ ಕಾರ್ಯಕರ್ತರಿಂದ ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಶೀಳನೆರೆ ಕ್ಷೇತ್ರದ ಜೆಡಿಎಸ್ ಜಿ.ಪಂ. ಸದಸ್ಯ ಮಂಜು ಬೆಂಬಲಿಗರಿಂದ ಕೈ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ.

ಕೆ.ಆರ್.ಪೇಟೆ ತಾಲೂಕಿನ ಹರಳಹಳ್ಳಿ ಬಳಿ ಅಕ್ರಮ ಕಲ್ಲುಗಣಿಗಾರಿಕೆ ನಡೆಸುತ್ತಿರುವ ಜೆಡಿಎಸ್ ಜಿ.ಪಂ.ಸದಸ್ಯ ಮಂಜು ಒಡೆತನಕ್ಕೆ ಸೇರಿದ ಕ್ರಷರ್ ಬಳಿ ಘಟನೆ ನಡೆದಿದೆ.
ಅರಣ್ಯ ಇಲಾಖೆ ಜಾಗದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪ  ಜಿ.ಪಂ.‌ಸದಸ್ಯನ ವಿರುದ್ಧ ಕೇಳಿಬಂದಿದೆ.
ಈ ವಿಚಾರವಾಗಿ ಅರಣ್ಯಾಧಿಕಾರಿಗಳು, ಮಾಜಿ ಕೈ ಶಾಸಕರ ಜೊತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಗೆ ತೆರಳಿದ್ದ ಕೈ ಕಾರ್ಯಕರ್ತರ ಜತೆ ಗಲಾಟೆ ನಡೆದಿದೆ.

ಮಾಜಿ ಕೈ ಶಾಸಕರೊಂದಿಗೆ ಬಂದಿದ್ದ ಕೈ ಕಾರ್ಯಕರ್ತರ ಮೇಲೆ ಮಂಜು ಬೆಂಬಲಿಗರಿಂದ ಹಲ್ಲೆಗೆ ಯತ್ನ ನಡೆದಿದೆ. ಸ್ಥಳದಲ್ಲಿ ಗುಂಪು ಘರ್ಷಣೆಯಿಂದ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಕೆ.ಆರ್.ಪೇಟೆ ಪೊಲೀಸರ ದೌಡಾಯಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments