Webdunia - Bharat's app for daily news and videos

Install App

ವಿಧಾನಸೌಧದಲ್ಲಿ ಮೈತ್ರಿ- ಸಕ್ಕರೆ ನಾಡಲ್ಲಿ ಕುಸ್ತಿ....!

Webdunia
ಶುಕ್ರವಾರ, 14 ಡಿಸೆಂಬರ್ 2018 (20:37 IST)
ಮಂಡ್ಯದಲ್ಲಿ   ಜೆಡಿಎಸ್ - ಕಾಂಗ್ರೆಸ್ ಜಟಾಪಟಿ ಮತ್ತೆ ಮುಂದುವರಿದಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ಜಟಾಪಟಿ ಮಾಡಿಕೊಂಡಿದ್ದಾರೆ.

ಮಂಡ್ಯದಲ್ಲಿ ಮತ್ತೆ  ಜೆಡಿಎಸ್ - ಕೈ ಕಾರ್ಯಕರ್ತರ ಜಟಾಪಟಿ ಶುರುವಾಗಿದೆ. K.R.ಪೇಟೆ ಕ್ಷೇತ್ರದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ - ಕೈ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.
ಜೆಡಿಎಸ್ ಕಾರ್ಯಕರ್ತರಿಂದ ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಶೀಳನೆರೆ ಕ್ಷೇತ್ರದ ಜೆಡಿಎಸ್ ಜಿ.ಪಂ. ಸದಸ್ಯ ಮಂಜು ಬೆಂಬಲಿಗರಿಂದ ಕೈ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ.

ಕೆ.ಆರ್.ಪೇಟೆ ತಾಲೂಕಿನ ಹರಳಹಳ್ಳಿ ಬಳಿ ಅಕ್ರಮ ಕಲ್ಲುಗಣಿಗಾರಿಕೆ ನಡೆಸುತ್ತಿರುವ ಜೆಡಿಎಸ್ ಜಿ.ಪಂ.ಸದಸ್ಯ ಮಂಜು ಒಡೆತನಕ್ಕೆ ಸೇರಿದ ಕ್ರಷರ್ ಬಳಿ ಘಟನೆ ನಡೆದಿದೆ.
ಅರಣ್ಯ ಇಲಾಖೆ ಜಾಗದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪ  ಜಿ.ಪಂ.‌ಸದಸ್ಯನ ವಿರುದ್ಧ ಕೇಳಿಬಂದಿದೆ.
ಈ ವಿಚಾರವಾಗಿ ಅರಣ್ಯಾಧಿಕಾರಿಗಳು, ಮಾಜಿ ಕೈ ಶಾಸಕರ ಜೊತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಗೆ ತೆರಳಿದ್ದ ಕೈ ಕಾರ್ಯಕರ್ತರ ಜತೆ ಗಲಾಟೆ ನಡೆದಿದೆ.

ಮಾಜಿ ಕೈ ಶಾಸಕರೊಂದಿಗೆ ಬಂದಿದ್ದ ಕೈ ಕಾರ್ಯಕರ್ತರ ಮೇಲೆ ಮಂಜು ಬೆಂಬಲಿಗರಿಂದ ಹಲ್ಲೆಗೆ ಯತ್ನ ನಡೆದಿದೆ. ಸ್ಥಳದಲ್ಲಿ ಗುಂಪು ಘರ್ಷಣೆಯಿಂದ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಕೆ.ಆರ್.ಪೇಟೆ ಪೊಲೀಸರ ದೌಡಾಯಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments