Select Your Language

Notifications

webdunia
webdunia
webdunia
webdunia

ಸರ್ಕಾರ ಉಳಿಸಿಕೊಳ್ಳಲು ಮೈತ್ರಿ ನಾಯಕರ ಪಣ

ಸರ್ಕಾರ ಉಳಿಸಿಕೊಳ್ಳಲು ಮೈತ್ರಿ ನಾಯಕರ ಪಣ
ಬೆಂಗಳೂರು , ಶನಿವಾರ, 25 ಮೇ 2019 (16:38 IST)
ಸರ್ಕಾರ ಉಳಿಸಿಕೊಳ್ಳಲು ಮೈತ್ರಿ ನಾಯಕರು ಪಣತೊಟ್ಟಿದ್ದಾರೆ.  

ಮೈತ್ರಿ ಸರಕಾರ ಅಲುಗಾಡುತ್ತಿದೆ. ಆದ್ರೆ ರಾಜೀನಾಮೆಗೆ ಸಿದ್ಧರಾಗಿರುವ 12 ಕ್ಕೂ ಹೆಚ್ಚು ಶಾಸಕರ ನಡೆ ಕುತೂಹಲ ಕೆರಳಿಸಿದೆ.
ಕಾಂಗ್ರೆಸ್ ನ 8, ಜೆಡಿಎಸ್ ನ ನಾಲ್ವರು ರಾಜೀನಾಮೆಗೆ ರೆಡಿಯಾಗಿದ್ದಾರೆ ಎಂಬ ಸುದ್ದಿಗಳು ಬಲವಾಗಿ ಹರಿದಾಡಲಾರಂಭಿಸಿವೆ.
ಬಿಜೆಪಿ ನಾಯಕರ ಗ್ರೀನ್ ಸಿಗ್ನಲ್ ಗಾಗಿ ಕಾಯುತ್ತಿದ್ದಾರೆ ಶಾಸಕರು ಎನ್ನಲಾಗಿದೆ.

ಕೇಂದ್ರದಲ್ಲಿ ಬಿಜೆಪಿ ಅಭೂತಪೂರ್ವ ಜಯ ದಾಖಲಿಸಿದೆ. ಈ ಹಿನ್ನೆಲೆ ತಮ್ಮ ರಾಜೀನಾಮೆ ನಿರ್ಧಾರ ಗಟ್ಟಿ ಮಾಡಿಕೊಂಡಿದ್ದಾರೆ ಹಲವು ಶಾಸಕರು ಎನ್ನಲಾಗುತ್ತಿದೆ.

ಕೇಂದ್ರದಲ್ಲಿ ಸರ್ಕಾರ ರಚನೆ ಬಳಿಕ ರಾಜ್ಯ ರಾಜಕಾರಣದಲ್ಲಿ ಕಂಪನ ಉಂಟಾಗಲಿದೆ. ಈ ಹಿಂದೆಯೇ ರಾಜೀನಾಮೆ ತೀರ್ಮಾನ ಪ್ರಕಟಿಸಿದ್ದಾರೆ ರಮೇಶ್ ಜಾರಕಿಹೊಳಿ. ಫಲಿತಾಂಶದ ಬಳಿಕ ರಾಜೀನಾಮೆಗೆ ಸಿದ್ಧವಾಗಿದ್ದಾರೆ ರಮೇಶ್ ಜಾರಕಿಹೊಳಿ. ಬಿಜೆಪಿ ನಾಯಕರ ಸಂದೇಶಕ್ಕೆ ಕಾಯುತ್ತಿದ್ದಾರೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ.




Share this Story:

Follow Webdunia kannada

ಮುಂದಿನ ಸುದ್ದಿ

ನಟ ಮೋಹನ್ ಲಾಲ್ ಗೆ ಮರೆಯದೇ ಥ್ಯಾಂಕ್ಸ್ ಹೇಳಿದ ಪ್ರಧಾನಿ ಮೋದಿ