Select Your Language

Notifications

webdunia
webdunia
webdunia
webdunia

ಕರ್ನಾಟಕ ಹೈಕೋರ್ಟ್‌ ಹಂಗಾಮಿ ಸಿಜೆ ಅಗಿ ಅಲೋಕ್‌ ಆರಾಧೆ ನೇಮಕ

ಕರ್ನಾಟಕ ಹೈಕೋರ್ಟ್‌ ಹಂಗಾಮಿ ಸಿಜೆ ಅಗಿ ಅಲೋಕ್‌ ಆರಾಧೆ ನೇಮಕ
bengaluru , ಗುರುವಾರ, 30 ಜೂನ್ 2022 (17:13 IST)
ಜುಲೈ 2ರಂದು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನಿವೃತ್ತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.
ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಗುರುವಾರ ಟ್ವೀಟ್ ಮಾಡಿ ನ್ಯಾಯಮೂರ್ತಿ ಆರಾಧೆ ಕರ್ನಾಟಕ ಹೈಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದು, ಜುಲೈ 3ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ನ್ಯಾಯಮೂರ್ತಿ ಅವಸ್ಥಿ ಜುಲೈ 2ರಂದು ತಮ್ಮ 62ನೇ ಹುಟ್ಟುಹಬ್ಬಕ್ಕೂ ಮುನ್ನಾದಿನದಂದು ನಿವೃತ್ತರಾಗುತ್ತಾರೆ. ಸುಪ್ರೀಂ ಕೋರ್ಟ್ ನ್ಯಾಯಮರ್ತಿಗಳು 65ನೇ ವರ್ಷ ವಯಸ್ಸಿಗೆ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳು 62ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಾರಾಷ್ಟ್ರದಲ್ಲಿ ಹೈಡ್ರಾಮಾ: ಸಂಜೆ ಏಕನಾಥ್‌ ಶಿಂಧೆ ಪ್ರಮಾಣವಚನ