ಸಂಸ್ಕೃತದಲ್ಲಿ ಅಲೋಕ್​​ಕುಮಾರ್​​ ಮಾತು

Webdunia
ಶನಿವಾರ, 20 ಆಗಸ್ಟ್ 2022 (13:17 IST)
ಸಾರ್ವಕರ್ ಫ್ಲೆಕ್ಸ್​ ವಿಚಾರದಲ್ಲಿ ಶಿವಮೊಗ್ಗದಲ್ಲಿ ಉಂಟಾಗಿದ್ದ ಗಲಭೆ ಸಂಬಂಧ ಎಡಿಜಿಪಿ ಅಲೋಕ್ ಕುಮಾರ್ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಈ ವೇಳೆ, ಸಂಸ್ಕೃತ ಗ್ರಾಮ ಮತ್ತೂರಿಗೂ ಭೇಟಿ ನೀಡಿದ್ದಾರೆ. ಇಲ್ಲಿನ ಗ್ರಾಮಸ್ಥರ ಜೊತೆ ಸಂಸ್ಕೃತದಲ್ಲಿಯೇ ಮಾತನಾಡಿದ್ದು, ಆ ವಿಡಿಯೋವನ್ನು ಅಲೋಕ್ ಕುಮಾರ್​ ಅವರು ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಶಿವಮೊಗ್ಗ ನಗರದಿಂದ 10 ಕಿ.ಮೀ. ದೂರವಿರುವ ಮತ್ತೂರು ಗ್ರಾಮಕ್ಕೆ ಅನಿರೀಕ್ಷಿತ ಭೇಟಿ ನೀಡಿದ್ದಾರೆ. ಗ್ರಾಮದಲ್ಲಿ ಸಿಕ್ಕವರ ಜೊತೆ ಸಂಸ್ಕೃತದಲ್ಲಿಯೇ ಮಾತನಾಡಿದ್ದಾರೆ. ಇದು ಒಂದು ರೀತಿ ಸಹಜ ಸಂಭಾಷಣೆ ಎಂಬುವಂತೆ ಇದೆ.ಈ ವಿಚಾರವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. 'ಸಂಸ್ಕೃತ ಒಂದು ಶಾಸ್ತ್ರೀಯ ಭಾಷೆ, ಅದರ ದನಿಯೇ ಕಿವಿಗೆ ಸಂಗೀತವಿದ್ದಂತೆ, ಈ ನಿಟ್ಟಿನಲ್ಲಿ ಮತ್ತೂರಿಗೆ ಭೇಟಿ ನೀಡಿ ಅಲ್ಲಿನವರ ಜೊತೆ ಒಂದಿಷ್ಟು ಮಾತುಕತೆ ನಡೆಸಿದೆ. ಎಲ್ಲ ಶಾಸ್ತ್ರೀಯ ಭಾಷೆಗಳನ್ನು ರಕ್ಷಿಸುವ ಹಾಗೂ ಪ್ರೋತ್ಸಾಹಿಸುವ ಅಗತ್ಯತೆ ಇದೆ' ಎಂದು ಅಲೊಕ್ ಕುಮಾರ್ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ದಲಿತರು, ಸಂವಿಧಾನ, ಡಾ.ಅಂಬೇಡ್ಕರರ ಪರ ಇಲ್ಲ: ಛಲವಾದಿ ನಾರಾಯಣಸ್ವಾಮಿ

ತಾನೂ ತೆಗೆದುಕೊಂಡ ನಿರ್ಧಾರಕ್ಕೆ ಟೀಕೆ ಬರುತ್ತಿದ್ದ ಹಾಗೇ ದಿಟ್ಟ ನಿರ್ಧಾರ ಕೈಗೊಂಡ ಸಿಎಂ ವಿಜಯ್

ಪತ್ನಿ ಕಾಪಾಡಿ ಎಂದು ಕಿರುಚುವಾಗಲೇ ಯಮುನಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಪತಿ Video

ಕಾಂಗ್ರೆಸ್ ನಿಂದ ಎಸ್ಟಿ ಸಮುದಾಯಕ್ಕೆ ದೊಡ್ಡ ಅನ್ಯಾಯ: ಆರ್.ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments