Webdunia - Bharat's app for daily news and videos

Install App

ಸಂಸ್ಕೃತದಲ್ಲಿ ಅಲೋಕ್​​ಕುಮಾರ್​​ ಮಾತು

Webdunia
ಶನಿವಾರ, 20 ಆಗಸ್ಟ್ 2022 (13:17 IST)
ಸಾರ್ವಕರ್ ಫ್ಲೆಕ್ಸ್​ ವಿಚಾರದಲ್ಲಿ ಶಿವಮೊಗ್ಗದಲ್ಲಿ ಉಂಟಾಗಿದ್ದ ಗಲಭೆ ಸಂಬಂಧ ಎಡಿಜಿಪಿ ಅಲೋಕ್ ಕುಮಾರ್ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಈ ವೇಳೆ, ಸಂಸ್ಕೃತ ಗ್ರಾಮ ಮತ್ತೂರಿಗೂ ಭೇಟಿ ನೀಡಿದ್ದಾರೆ. ಇಲ್ಲಿನ ಗ್ರಾಮಸ್ಥರ ಜೊತೆ ಸಂಸ್ಕೃತದಲ್ಲಿಯೇ ಮಾತನಾಡಿದ್ದು, ಆ ವಿಡಿಯೋವನ್ನು ಅಲೋಕ್ ಕುಮಾರ್​ ಅವರು ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಶಿವಮೊಗ್ಗ ನಗರದಿಂದ 10 ಕಿ.ಮೀ. ದೂರವಿರುವ ಮತ್ತೂರು ಗ್ರಾಮಕ್ಕೆ ಅನಿರೀಕ್ಷಿತ ಭೇಟಿ ನೀಡಿದ್ದಾರೆ. ಗ್ರಾಮದಲ್ಲಿ ಸಿಕ್ಕವರ ಜೊತೆ ಸಂಸ್ಕೃತದಲ್ಲಿಯೇ ಮಾತನಾಡಿದ್ದಾರೆ. ಇದು ಒಂದು ರೀತಿ ಸಹಜ ಸಂಭಾಷಣೆ ಎಂಬುವಂತೆ ಇದೆ.ಈ ವಿಚಾರವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. 'ಸಂಸ್ಕೃತ ಒಂದು ಶಾಸ್ತ್ರೀಯ ಭಾಷೆ, ಅದರ ದನಿಯೇ ಕಿವಿಗೆ ಸಂಗೀತವಿದ್ದಂತೆ, ಈ ನಿಟ್ಟಿನಲ್ಲಿ ಮತ್ತೂರಿಗೆ ಭೇಟಿ ನೀಡಿ ಅಲ್ಲಿನವರ ಜೊತೆ ಒಂದಿಷ್ಟು ಮಾತುಕತೆ ನಡೆಸಿದೆ. ಎಲ್ಲ ಶಾಸ್ತ್ರೀಯ ಭಾಷೆಗಳನ್ನು ರಕ್ಷಿಸುವ ಹಾಗೂ ಪ್ರೋತ್ಸಾಹಿಸುವ ಅಗತ್ಯತೆ ಇದೆ' ಎಂದು ಅಲೊಕ್ ಕುಮಾರ್ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments