ಅಲೋಕ್‌ ಕುಮಾರ್‌ ವಿರುದ್ಧ ಮುತಾಲಿಕ್‌ ಕಿಡಿ

Webdunia
ಗುರುವಾರ, 1 ಸೆಪ್ಟಂಬರ್ 2022 (22:02 IST)
ಸಾರ್ವಜನಿಕ ಗಣೇಶೋತ್ಸವ ಮಂಟಪಗಳಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆಯಬೇಕೆಂಬ ಎಡಿಜಿಪಿ ಅಲೋಕ್‌ಕುಮಾರ್ ಹೇಳಿಕೆಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಆಕ್ರೋಶ ಹೊರಹಾಕಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಎಡಿಜಿಪಿಯವರೇ ಯಾವ ದೇಶದಲ್ಲಿ ಇದ್ದೀವಿ ನಾವು? 75 ವರ್ಷ ಆಯ್ತು ಸ್ವಾತಂತ್ರ್ಯ ಸಿಕ್ಕಿ, ಸ್ವಾತಂತ್ರ್ಯ ನಮಗೆ ಸಿಗಬೇಕಾದ್ರೆ ತಿಲಕ್‌, ಸಾವರ್ಕರ್ ಕಾರಣ ಎಂಬುದು ನಿಮಗೆ ಗೊತ್ತಿಲ್ವಾ? ಎಲ್ಲದಕ್ಕೂ ಪರ್ಮಿಷ‌ನ್ ತಗೆದುಕೊಳ್ಳಬೇಕಾ? ಸಾವರ್ಕರ್ ತಮ್ಮ ಆಯುಷ್ಯದಲ್ಲಿ ಅರ್ಧ ಆಯುಷ್ಯ ಜೈಲಿನಲ್ಲಿ ಕಳೆದ ವ್ಯಕ್ತಿ, ಸ್ವಾತಂತ್ರ್ಯದಲ್ಲಿ ಹೋರಾಟ ಮಾಡಿದ ವ್ಯಕ್ತಿಗಾಗಿ ಪರ್ಮಿಷನ್ ತಗೆದುಕೊಳ್ಳಬೇಕಾ ನಾವು? ತಾವು ಕ್ಷಮೆ ಕೇಳಬೇಕು ಅಂತ ಅಂತ ಮುತಾಲಿಕ್‌ ಗುಡುಗಿದ್ರು. ಈ ರೀತಿ ನಿಮ್ಮ ಹೇಳಿಕೆಯಿಂದ ದೇಶಭಕ್ತಿ, ಸ್ವಾತಂತ್ರ್ಯ, ಸಂವಿಧಾನ ಮೇಲೆ ಪರಿಣಾಮ ಆಗುತ್ತದೆ.ನಿಮ್ಮ ಹೇಳಿಕೆ ಸರಿಯಲ್ಲ, ದೇಶಭಕ್ತರಿಗೆ ಅವಮಾನ ಮಾಡ್ತಿದೀರಿ ನೀವು ಸಾವರ್ಕರ್ ಬಗ್ಗೆ ವಿರೋಧ ಮಾಡ್ತಾರಂದ್ರೆ ಅರ್ಥ ಸಾವರ್ಕರ್ ದೇಶಭಕ್ತಿ ಕಡಿಮೆ ಆಗಿಲ್ಲ,ಆಗೋದೂ ಇಲ್ಲ..ಅದಕ್ಕೆ ಕಲ್ಲು ಹಾಕಕ್ಕೋಗಬೇಡಿ, ಇದನ್ನ ವಿರೋಧಿಸುತ್ತಿದ್ದೇನೆ ಅಂತ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಪ್ರಮೋದ್ ಮುತಾಲಿಕ್ ಅಕ್ರೋಶ ವ್ಯಕ್ತಪಡಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments