ಅಚ್ಚರಿ ಎನಿಸಿದರೂ ಸತ್ಯ : 2 ತಿಂಗಳಲ್ಲಿ 9 ಬಾರಿ ಹಾವು ಕಡಿದ್ರೂ ಈ ಬಾಲಕನಿಗೆ ಏನು ಆಗಿಲ್ಲ!

Webdunia
ಮಂಗಳವಾರ, 29 ಆಗಸ್ಟ್ 2023 (07:47 IST)
ಕಲಬುರಗಿ : ಹಾವು ಕಂಡ್ರೆ ಸಾಕು ಜನ ಮಾರುದ್ದ ಹೌಹಾರಿ ಓಡಿ ಹೋಗುತ್ತಾರೆ. ಅಂಥದ್ದರಲ್ಲಿ ಕಲಬುರಗಿಯ ಓರ್ವ ಬಾಲಕನಿಗೆ ಕಳೆದ ಎರಡು ತಿಂಗಳಲ್ಲಿಯೇ 9 ಬಾರಿ ಹಾವು ಕಚ್ಚಿದೆಯಂತೆ.

ಹೌದು. ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಹಳಕರ್ಟಿ ಗ್ರಾಮದ ನಿವಾಸಿ ಪ್ರಜ್ವಲ್ಗೆ ಜುಲೈ 3ರಂದು ಮನೆ ಅಂಗಳದಲ್ಲಿ ಆಟವಾಡುವಾಗ ಹಾವು ಕಚ್ಚಿದೆ. ಆಗ ಈ ಬಾಲಕನ ಪೋಷಕರು ಬೇವಿನ ಮರದ ಎಲೆ ಹಾಗೂ ಖಾರದ ಪುಡಿ ತಿನ್ನಿಸಿದ್ದಾರೆ. ಆಗ ಬಾಯಿಗೆ ಸಿಹಿ, ಖಾರ ಎರಡೂ ಹತ್ತುತ್ತಿಲ್ಲ ಅಂತಾ ಬಾಲಕ ಹೇಳಿದ್ದಾನೆ.

ಕೂಡಲೇ ಆತನನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ್ದಾರೆ. ಅದಾದ ಬಳಿಕ ನಾಲ್ಕು-ಐದು ದಿನಗಳ ಮಧ್ಯೆದಲ್ಲಿ ಈ ಬಾಲಕನಿಗೆ ನಿರಂತರವಾಗಿ ಇಲ್ಲಿಯವರೆಗೆ ಒಟ್ಟು 9 ಬಾರಿ ಹಾವು ಕಡಿತವಾಗಿರೋದು ಬೆಳಕಿಗೆ ಬಂದಿದೆ.

ಸದ್ಯ ಇಲ್ಲಿಯವರೆಗೆ 9 ಬಾರಿ ಹಾವು ಕಚ್ಚಿರುವ ಗುರುತುಗಳು ಕೂಡ ಆತನ ಕಾಲಿನಲ್ಲಿದೆ. ಅದರಲ್ಲಿ 5 ಬಾರಿ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ರೆ, ಇನ್ನುಳಿದ 4 ಬಾರಿ ಸ್ಥಳೀಯ ನಾಟಿ ವೈದ್ಯರಿಂದ ಔಷಧಿಯನ್ನು ಪೋಷಕರು ಕೊಡಿಸಿದ್ದಾರೆ. ಆದರೆ ಇಲ್ಲಿಯವರೆಗೂ ಆ ಹಾವು ಪ್ರಜ್ವಲ್ ಬಿಟ್ಟು ಯಾರ ಕಣ್ಣಿಗೂ ಸಹ ಕಂಡಿಲ್ಲ. ಹೀಗಾಗಿ ಆತನ ಮನೆ ಸುತ್ತ ಹಾವು ಹುಡುಕುವುದೇ ಸದ್ಯ ನೆರೆಹೊರೆಯವರ ಕೆಲಸವಾಗಿದೆ.

 
ಪ್ರತಿ ಬಾರಿ ಈ ಬಾಲಕ ಒಬ್ಬನ ಮೇಲೆ ಮಾತ್ರ ಹಾವು ಕಚ್ಚಿರುವುದಾಗಿ ಹೇಳುತ್ತಿರುವುದು ಸಹ ಹಲವು ಅನುಮಾನಕ್ಕೂ ಸಹ ಎಡೆಮಾಡಿಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ಪ್ರಕರಣದ ಬಗ್ಗೆ ಜಿ ಪರಮೇಶ್ವರ್ ರಿಯ್ಯಾಕ್ಷನ್

ಐದು ವರ್ಷವೂ ನೀವೇ ಮುಖ್ಯಮಂತ್ರಿಯಾ ಎಂದಿದ್ದಕ್ಕೆ ಸಿದ್ದರಾಮಯ್ಯ ಹೀಗೆ ಹೇಳಿದ್ರು

ಬೆಂಗಳೂರು ಎಟಿಎಂ ವಾಹನ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಕಿಡಿಗೇಡಿಗಳು ಬಳಸಿದ್ದ ಕಾರು ಪತ್ತೆ

ಬೀದಿನಾಯಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ₹5ಲಕ್ಷ: ಗಾಯಗೊಂಡವರಿಗೂ ಪರಿಹಾರ ಘೋಷಣೆ

ಯಕ್ಷಗಾನ ಬಣ್ಣ ಕಳಚುವ ಮುನ್ನವೇ ಹೃದಯಾಘಾತದಿಂದ ನಿಧನರಾದ ಮಹಿಷಾಸುರ ಪಾತ್ರದಾರಿ

ಮುಂದಿನ ಸುದ್ದಿ
Show comments