ದೇವರ ಅಭಿಷೇಕಕ್ಕೆ ನೀರು ತರಲು ಹೋದ ಬಾಲಕ ನೀರುಪಾಲು

Webdunia
ಶುಕ್ರವಾರ, 13 ಅಕ್ಟೋಬರ್ 2017 (21:01 IST)
ಕಲಬುರ್ಗಿ: ದೇವರಿಗೆ ನೀರು ತರಲು ನದಿಗೆ ಹೋಗಿದ್ದ ಬಾಲಕ ನೀರುಪಾಲಾಗಿರುವ ಘಟನೆ ಅಫ್ಜಲ್ ಪುರ ತಾಲೂಕಿನ ತೆಲ್ಲೂರು ಗ್ರಾಮದ ಬಳಿ ಅಮರ್ಜಾ ನದಿಯಲ್ಲಿ ನಡೆದಿದೆ.

ತೆಲ್ಲೂರು ನಿವಾಸಿ ಶಾಂತಪ್ಪ ಧರಿಗೊಂಡ ಪುತ್ರ 9ನೇ ತರಗತಿ ಓದುತ್ತಿದ್ದ ಸಾಗರ(16) ಮೃತ ಬಾಲಕ. ಇಂದು ಗ್ರಾಮದ ದೇವತೆ ಜಾತ್ರೆಯಿದ್ದ ಹಿನ್ನೆಲೆ ಮೀಸಲು ನೀರು ತಂದು ದೇವರಿಗೆ ಅಭಿಷೇಕ ಮಾಡಲು ನದಿಗೆ ಹೋಗಿದ್ದ. ಅಮರ್ಜಾ ಡ್ಯಾಂನಿಂದ ಬಿಟ್ಟ ನೀರು ಒಮ್ಮಿಂದೊಮ್ಮಲೆ ಹರಿದು ಬಂದಿರೋದ್ರಿಂದ ನೀರಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ ಎನ್ನಲಾಗಿದೆ.

ಮಳೆ ಹಿನ್ನೆಲೆ ಡ್ಯಾಂನಿಂದ ಹೆಚ್ವಿನ ನೀರು ನದಿಗೆ ಹರಿಯಬಿಡಲಾಗುತ್ತಿದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ನದಿಗೆ ಹೋಗಿದ್ರಿಂದ ಈ ಅವಘಡ ಸಂಭವಿಸಿದೆ. ಬಾಲಕನ ಶವಕ್ಕಾಗಿ ಹುಡುಕಾಟ ನಡೆಸುತ್ತಿದ್ದು, ದೇವಲಗಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments