Select Your Language

Notifications

webdunia
webdunia
webdunia
webdunia

ಎಸ್ ಎಂ ಕೃಷ್ಣ ಹಿಂದೆಯೇ ರೆಬಲ್ ಸ್ಟಾರ್ ಅಂಬರೀಶ್ ಬಿಜೆಪಿಗೆ?

ಎಸ್ ಎಂ ಕೃಷ್ಣ ಹಿಂದೆಯೇ ರೆಬಲ್ ಸ್ಟಾರ್ ಅಂಬರೀಶ್ ಬಿಜೆಪಿಗೆ?
Bangalore , ಗುರುವಾರ, 9 ಫೆಬ್ರವರಿ 2017 (10:32 IST)
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಯತ್ತ ಮುಖ ಮಾಡಿರುವ ಹಿರಿಯ ನಾಯಕ ಎಸ್ ಎಂ ಕೃಷ್ಣ ಬೆನ್ನ ಹಿಂದೆಯೇ ರೆಬಲ್ ಸ್ಟಾರ್ ಅಂಬರೀಶ್ ಕೂಡಾ ನಡೆಯುವ ಸೂಚನೆ ಸಿಕ್ಕಿದೆ.

 
ಬಿಜೆಪಿ ಸೇರ್ಪಡೆಗೆ ಮಾಜಿ ಸಚಿವ ಆರ್.ಅಶೋಕ್ ಅಂಬರೀಶ್ ಗೆ ಆಹ್ವಾನವಿತ್ತಿದ್ದಾರೆ. ಇದಕ್ಕೆ ಅಂಬರೀಶ್ ಕೂಡಾ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ. ಅಂಬರೀಶ್ ಕೂಡಾ ಕೃಷ್ಣರಂತೆ ತಮ್ಮನ್ನು ಕಾಂಗ್ರೆಸ್ ನಲ್ಲಿ ಕಡೆಗಣಿಸುತ್ತಿದ್ದಾರೆ ಎಂದು ಈ ಹಿಂದೆ ಆರೋಪಿಸಿದ್ದರು.

ಒಂದು ವೇಳೆ ಈ ಇಬ್ಬರೂ ನಾಯಕರು ಏಕಕಾಲಕ್ಕೆ ಕಾಂಗ್ರೆಸ್ ತೊರೆದರೆ ಮಂಡ್ಯ ಕಾಂಗ್ರೆಸ್ ಗೆ ಭಾರೀ ನಷ್ಟವಾಗಲಿದೆ. ಆದರೆ ಅಂಬರೀಶ್ ಸೇರ್ಪಡೆಗೆ ಬಿಜೆಪಿ ಹೈಕಮಾಂಡ್ ಇನ್ನೂ ಹಸಿರು ನಿಶಾನೆ ತೋರಿಲ್ಲ. ಆದರೆ ಕೃಷ್ಣರನ್ನು ಬಿಜೆಪಿಗೆ ಸೇರಿಸುವ ಕುರಿತು ಬಿಜೆಪಿ ಹೈಕಮಾಂಡ್ ಒಲವು ತೋರಿದ್ದು, ರಾಜ್ಯಾಧ್ಯಕ್ಷ ಯಡಿಯೂರಪ್ಪ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ.  ದೇಶದಲ್ಲಿ ನಡೆಯುತ್ತಿರುವ ಪಂಚ ರಾಜ್ಯಗಳ ಚುನಾವಣೆ ನಂತರ ಇವರಿಬ್ಬರು ನಾಯಕರುಗಳ ರಾಜಕೀಯ ನಿಲುವಿನ ಸ್ಪಷ್ಟ ಚಿತ್ರಣ ದೊರಕಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬೆಳ್ಳಂ ಬೆಳಿಗ್ಗೆ ಕಾಂಗ್ರೆಸ್ ಶಾಸಕ ಎಂಟಿಬಿ ನಾಗರಾಜ್ ಗೆ ಐಟಿ ಅಧಿಕಾರಿಗಳ ಶಾಕ್