Webdunia - Bharat's app for daily news and videos

Install App

ಅಂಬರೀಶ್ ಅಸ್ಥಿ ವಿಸರ್ಜನೆ ಕಾರ್ಯಕ್ರಮಕ್ಕೆ ಕುಟುಂಬದವರಿಗೆ ಸಾಥ್ ನೀಡಿದ ರಾಕ್ ಲೈನ್, ದರ್ಶನ್

Webdunia
ಬುಧವಾರ, 28 ನವೆಂಬರ್ 2018 (10:56 IST)
ಬೆಂಗಳೂರು: ಶನಿವಾರ ನಿಧನರಾದ ಹಿರಿಯ ನಟ ಅಂಬರೀಶ್ ಅಸ್ಥಿ ಸಂಗ್ರಹ, ಹಾಲು ತುಪ್ಪ ಬಿಡುವ ಕಾರ್ಯಕ್ರಮ ಇಂದು ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿಯಲ್ಲಿ ನಡೆಯುತ್ತಿದೆ.


ಪುರೋಹಿತರ ಮಾರ್ಗದರ್ಶನದಂತೆ ಅಂಬರೀಶ್ ಪುತ್ರ ಅಭಿಷೇಕ್ ವಿಧಿ ವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಅಂಬರೀಶ್ ಕುಟುಂಬದ ಜತೆಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಟ ದೊಡ್ಡಣ್ಣ ಕೂಡಾ ಕಾರ್ಯಗಳಲ್ಲಿ ನೆರವಾಗಿದ್ದಾರೆ.

ಅಂಬರೀಶ್ ನಿಧನರಾದ ಸುದ್ದಿ ತಿಳಿದಾಗಿನಿಂದಲೂ ಅಂಬಿ ಕುಟುಂಬದ ಜತೆಗೇ ಇದ್ದ ರಾಕ್ ಲೈನ್ ವೆಂಕಟೇಶ್ ಇಂದೂ ಕೂಡಾ ಕುಟುಂಬದವರ ಜತೆಗೇ ಆಗಮಿಸಿ ಅಸ್ಥಿ ಸಂಗ್ರಹ ಕಾರ್ಯಕ್ಕೆ ನೆರವಾದರು. ಕೊಂಚ ತಡವಾಗಿ ಆಗಮಿಸಿದ ದರ್ಶನ್ ಕೂಡಾ ಬಳಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.  ಆದರೆ ಮೊನ್ನೆಯಿಂದ ಸಕ್ರಿಯರಾಗಿದ್ದ ರಾಕಿಂಗ್ ಸ್ಟಾರ್ ಯಶ್ ಇಂದು ಆಗಮಿಸಿರಲಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments