Select Your Language

Notifications

webdunia
webdunia
webdunia
webdunia

ಅಧಿವೇಶನಕ್ಕೆ ಗೈರು ಹಾಜರಾದ ಸಚಿವ ಅಂಬರೀಶ್

ಅಧಿವೇಶನಕ್ಕೆ ಗೈರು ಹಾಜರಾದ ಸಚಿವ ಅಂಬರೀಶ್
ಕಲ್ಬುರ್ಗಿ , ಶುಕ್ರವಾರ, 28 ನವೆಂಬರ್ 2014 (12:54 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಇಲ್ಲಿನ ಮಿನಿ ವಿಧಾನ ಸೌಧದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಗೆ ವಸತಿ ಸಚಿವ ಅಂಬರೀಶ್ ಗೈರು ಹಾಜರಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
 
ಹೌದು, ಸಿಎಂ ಸಿದ್ದರಾಮಯ್ಯನವರು ಅಧಿವೇಶನ ಹಿನ್ನೆಲೆ ತಮ್ಮ ಎಲ್ಲಾ ಸಂಪುಟ ಸದಸ್ಯರಿಗೂ ಕೂಡ ಕಡ್ಡಾಯವಾಗಿ ಹಾಜರಾಗುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಅದರೆ ಸಚಿವ ಅಂಬರೀಶ್ ಮಾತ್ರ ಸಿಎಂ ಸೂಚನೆಗೆ ಜಗ್ಗದೆ ಗೈರುಹಾಜರಾಗುವ ಮೂಲಕ ಅಚ್ಚರಿ ಸೃಷ್ಟಿಸಿದ್ದಾರೆ. ಅಲ್ಲದೇ ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿಯೇ ಉಳಿದುಕೊಂಡಿದ್ದಾರೆ. ಸಚಿವರ ಈ ಗೈರು ಹಾಜರಿಗೆ ನಿಗಮ ಮಂಡಳಿಗಳ ನೇಮಕ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅಂಬಿ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ನೀಡುತ್ತಿಲ್ಲ ಎಂಬುದೇ ಅಂಬರೀಶ್ ಅವರ ಅಸಮಧಾನಕ್ಕೆ ಕಾರಣ ಎನ್ನಲಾಗುತ್ತಿದೆ. 
 
ಇನ್ನು ಈ ಬಗ್ಗೆ ಸ್ವತಃ ಸಚಿವ ಅಂಬರೀಶ್ ಅವರೇ ಪ್ರತಿಕ್ರಿಯಿಸಿದ್ದು, ನನಗೂ ರಾಜಕೀಯದ ಬಗ್ಗೆ ತಿಳಿದಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಮಾತಿಗೆ ಸರಿಯಾದ ಪ್ರತಿಕ್ರಿಯೆ ನೀಡುತ್ತಿಲ್ಲ ಎನ್ನುವ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ. 

Share this Story:

Follow Webdunia kannada