Webdunia - Bharat's app for daily news and videos

Install App

ಅಧಿವೇಶನಕ್ಕೆ ಗೈರು ಹಾಜರಾದ ಸಚಿವ ಅಂಬರೀಶ್

Webdunia
ಶುಕ್ರವಾರ, 28 ನವೆಂಬರ್ 2014 (12:54 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಇಲ್ಲಿನ ಮಿನಿ ವಿಧಾನ ಸೌಧದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಗೆ ವಸತಿ ಸಚಿವ ಅಂಬರೀಶ್ ಗೈರು ಹಾಜರಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
 
ಹೌದು, ಸಿಎಂ ಸಿದ್ದರಾಮಯ್ಯನವರು ಅಧಿವೇಶನ ಹಿನ್ನೆಲೆ ತಮ್ಮ ಎಲ್ಲಾ ಸಂಪುಟ ಸದಸ್ಯರಿಗೂ ಕೂಡ ಕಡ್ಡಾಯವಾಗಿ ಹಾಜರಾಗುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಅದರೆ ಸಚಿವ ಅಂಬರೀಶ್ ಮಾತ್ರ ಸಿಎಂ ಸೂಚನೆಗೆ ಜಗ್ಗದೆ ಗೈರುಹಾಜರಾಗುವ ಮೂಲಕ ಅಚ್ಚರಿ ಸೃಷ್ಟಿಸಿದ್ದಾರೆ. ಅಲ್ಲದೇ ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿಯೇ ಉಳಿದುಕೊಂಡಿದ್ದಾರೆ. ಸಚಿವರ ಈ ಗೈರು ಹಾಜರಿಗೆ ನಿಗಮ ಮಂಡಳಿಗಳ ನೇಮಕ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅಂಬಿ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ನೀಡುತ್ತಿಲ್ಲ ಎಂಬುದೇ ಅಂಬರೀಶ್ ಅವರ ಅಸಮಧಾನಕ್ಕೆ ಕಾರಣ ಎನ್ನಲಾಗುತ್ತಿದೆ. 
 
ಇನ್ನು ಈ ಬಗ್ಗೆ ಸ್ವತಃ ಸಚಿವ ಅಂಬರೀಶ್ ಅವರೇ ಪ್ರತಿಕ್ರಿಯಿಸಿದ್ದು, ನನಗೂ ರಾಜಕೀಯದ ಬಗ್ಗೆ ತಿಳಿದಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಮಾತಿಗೆ ಸರಿಯಾದ ಪ್ರತಿಕ್ರಿಯೆ ನೀಡುತ್ತಿಲ್ಲ ಎನ್ನುವ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments