Select Your Language

Notifications

webdunia
webdunia
webdunia
webdunia

ಎಚ್ ಡಿಕೆ-ಸುಮಲತಾ ಸಮರ: ಇಂದು ಅಂಬಿ ಅಭಿಮಾನಿಗಳ ಸಭೆ

ಎಚ್ ಡಿಕೆ-ಸುಮಲತಾ ಸಮರ: ಇಂದು ಅಂಬಿ ಅಭಿಮಾನಿಗಳ ಸಭೆ
ಬೆಂಗಳೂರು , ಶುಕ್ರವಾರ, 9 ಜುಲೈ 2021 (09:40 IST)
ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ಅಂಬರೀಶ್ ನಡುವಿನ ಮಾತಿನ ಸಮರ ತಾರಕಕ್ಕೇರಿದ್ದು, ಇಂದು ರೆಬಲ್ ಸ್ಟಾರ್ ಅಂಬರೀಶ್ ಅಭಿಮಾನಿಗಳು ಸಭೆ ಸೇರಲಿದ್ದಾರೆ.


ನಿನ್ನೆ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ, ರೆಬಲ್ ಸ್ಟಾರ್ ಅಂಬರೀಶ್ ಕಾಲದಲ್ಲೇ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು ಎಂದು ಹೇಳಿಕೆ ನೀಡಿದ್ದರು. ಇದು ಸುಮಲತಾ ಸೇರಿದಂತೆ ಅಂಬಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಇಂದು ಅಂಬಿ ಅಭಿಮಾನಿಗಳ ಸಂಘದ ಅಧ್ಯಕ್ಷ ಬೇಲೂರು ಸೋಮಶೇಖರ್ ನೇತೃತ್ವದಲ್ಲಿ ಶ್ರೀರಂಗಪಟ್ಟಣದಲ್ಲಿ ಈ ಕುರಿತಂತೆ ಸಭೆ ನಡೆಸುತ್ತಿದ್ದಾರೆ. ಅಂಬಿ ಬಗ್ಗೆ ಲಘುವಾಗಿ ಹೇಳಿಕೆ ನೀಡಿದ ರವೀಂದ್ರ ಶ್ರೀಕಂಠಯ್ಯ ವಿರುದ್ಧ ಹೋರಾಟ ನಡೆಸಲು ಅಂಬಿ ಅಭಿಮಾನಿಗಳು ನಿರ್ಧರಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಹೊಸ ಕ್ಯಾಬಿನೆಟ್ ನಿಂದ ರಾಜ್ಯಗಳಿಗೆ ಬಂಪರ್ ಕೊಡುಗೆ