Select Your Language

Notifications

webdunia
webdunia
webdunia
webdunia

ಮತ್ತೆ ಸರ್ವಪಕ್ಷ ಸಭೆಗೆ ಗೈರುಹಾಜರಾದ ಅಂಬರೀಶ್

ಮತ್ತೆ ಸರ್ವಪಕ್ಷ ಸಭೆಗೆ ಗೈರುಹಾಜರಾದ ಅಂಬರೀಶ್
ಬೆಂಗಳೂರು , ಬುಧವಾರ, 28 ಸೆಪ್ಟಂಬರ್ 2016 (12:18 IST)
ಸುಪ್ರೀಂಕೋರ್ಟ್ ಆದೇಶದಂತೆ ಕಾವೇರಿ ನೀರು ತಮಿಳುನಾಡಿಗೆ ಹರಿಸಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದ ಸಭೆಗೆ ಮಾಜಿ ಸಚಿವ ಅಂಬರೀಶ್ ಮತ್ತೆ ಗೈರುಹಾಜರಾಗಿದ್ದಾರೆ.
 
ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಮಂಡ್ಯ, ಮೈಸೂರು ಜಿಲ್ಲೆಗಳು ಭಾರಿ ಪ್ರತಿಭಟನೆಯಲ್ಲಿ ತೊಡಗಿದ್ದರೂ ಮಂಡ್ಯ ಕ್ಷೇತ್ರದ ಶಾಸಕ ಅಂಬರೀಶ್ ಮಾತ್ರ ತಮಗು, ಜನರ ಹೋರಾಟಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ಎನ್ನುವಂತೆ ವರ್ತಿಸುತ್ತಿರುವುದು ಜನರಲ್ಲಿ ಆಕ್ರೋಶ ಮೂಡಿಸಿದೆ.
 
ಮೊದಲ ಬಾರಿಗೆ ಸುಪ್ರೀಂಕೋರ್ಟ್ ತೀರ್ಪು ಬಂದಾಗ ಅಮೆರಿಕದಲ್ಲಿ ನಡೆಯುತ್ತಿದ್ದ ಅಕ್ಕ ಸಮ್ಮೇಳದಲ್ಲಿ ಪಾಲ್ಗೊಂಡಿದ್ದರಿಂದ ಜನರು ಮೌನವಾಗಿದ್ದರು. ಆದರೆ, ಬೆಂಗಳೂರಿನಲ್ಲಿದ್ದು ಕಾವೇರಿ ಹೋರಾಟಗಾರರಿಗೆ ಬೆಂಬಲ ನೀಡದಿರುವ ಅಂಬರೀಶ್ ವರ್ತನೆ ಗೆ ಕಾವೇರಿ ಹಿಸರಕ್ಷಣಾ ಸಮಿತಿ ಸದಸ್ಯ ಜಿ.ಮಾದೇಗೌಡ ಕೂಡಾ ಬೇಸರ ವ್ಯಕ್ತಪಡಿಸಿದ್ದಾರೆ.
 
ಈ ಹಿಂದೆ ನಡೆದ ಸರ್ವಪಕ್ಷ ಸಭೆಗೆ ಗೈರುಹಾಜರಾಗಿದ್ದ ಅಂಬರೀಶ್, ಇಂದು ಕೂಡಾ ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ಸಭೆಗೆ ಗೈರುಹಾಜರಾಗದೇ ಜನವಿರೋಧಿ ವರ್ತನೆ ತೋರಿದ್ದಾರೆ ಮಂಡ್ಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಬದುಕಿದ್ದರೆ ಸಂವಿಧಾನ, ಸತ್ತರೆ ಯಾವ ಸಂವಿಧಾನ: ಈಶ್ವರಪ್ಪ ಗುಡುಗು