ರಾಜ್ಯ ಸಚಿವ ಸಂಪುಟದಿಂದ ಕೈಬಿಟ್ಟಿರುವ ಹಿನ್ನೆಲೆಯಲ್ಲಿ ನಟ ರೆಬಲ್ ಸ್ಟಾರ್ ಅಂಬರೀಶ್ ಮಂಡ್ಯ ವಿಧಾನಸಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಂಡ್ಯ ವಿಧಾನಸಭೆ ಶಾಸಕನಾಗಿರುವ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಒಂದೇ ವಾಕ್ಯದಲ್ಲಿ ರಾಜೀನಾಮೆ ನೀಡಿರುವ ನಟ ರೆಬಲ್ ಸ್ಟಾರ್ ಅಂಬರೀಶ್, ತಮ್ಮ ರಾಜೀನಾಮೆ ಪತ್ರವನ್ನು ತಮ್ಮ ಆಪ್ತಕಾರ್ಯದರ್ಶಿ ಎಸ್.ಶ್ರೀನಿವಾಸ್ ಮೂಲಕ ಡೆಪ್ಯುಟಿ ಸ್ಪೀಕರ್ ಶಿವಶಂಕರ್ ರೆಡ್ಡಿ ಅವರಿಗೆ ರವಾನಿಸಿದ್ದಾರೆ.
ಮಂಡ್ಯ ವಿಧಾನಸಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ನಟ ರೆಬಲ್ ಸ್ಟಾರ್ ಅಂಬರೀಶ್ ರಾಜೀನಾಮೆ ನೀಡಿರುವುದನ್ನು ನಿರಾಕರಿಸಿರುವ ಡೆಪ್ಯುಟಿ ಸ್ಪೀಕರ್ ಶಿವಶಂಕರರೆಡ್ಡಿ, ಅವರಿಗೆ ಖುದ್ದಾಗೆ ಬಂದು ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ.
ರಾಜ್ಯ ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಅಸಮಾಧಾನಗೊಂಡು ರೆಬಲ್ ಸ್ಟಾರ್ ಅಂಬರೀಶ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.