Select Your Language

Notifications

webdunia
webdunia
webdunia
webdunia

ಅಂಬರೀಶ್ ಹಣೆಗೆ ಮಂಡ್ಯದ ಮಣ್ಣಿನ ತಿಲಕವಿಟ್ಟ ಪತ್ನಿ ಸುಮಲತಾ

ಅಂಬರೀಶ್ ಹಣೆಗೆ ಮಂಡ್ಯದ ಮಣ್ಣಿನ ತಿಲಕವಿಟ್ಟ ಪತ್ನಿ ಸುಮಲತಾ
ಮಂಡ್ಯ , ಸೋಮವಾರ, 26 ನವೆಂಬರ್ 2018 (10:55 IST)
ಮಂಡ್ಯ: ಮೊನ್ನೆ ನಿಧನರಾದ ಮಂಡ್ಯದ ಗಂಡು, ಹಿರಿಯ ನಟ ಅಂಬರೀಶ್ ಪಾರ್ಥಿವ ಶರೀರ ಅಂತಿಮ ದರ್ಶನದ ಬಳಿಕ ಇದೀಗ ಬೆಂಗಳೂರಿನತ್ತ ಸಾಗಿದೆ.


ಬೆಂಗಳೂರಿನತ್ತ ಸಾಗುವ ಮೊದಲು ಮಂಡ್ಯದಲ್ಲಿ ಲಕ್ಷಾಂತರ ಮಂದಿ ತಮ್ಮ ನೆಚ್ಚಿನ ನಾಯಕನ ಅಂತಿಮ ದರ್ಶನ ಪಡೆದಿದ್ದಾರೆ. ಸೇನಾ ಹೆಲಿಕಾಪ್ಟರ್ ಮೂಲಕ ಅಂಬರೀಶ್ ಪಾರ್ಥಿವ ಶರೀರವನ್ನು ಬೆಂಗಳೂರಿನ ಎಚ್ ಎಎಲ್ ಏರ್ ಪೋರ್ಟ್ ಗೆ ಕರೆದೊಯ್ಯಲಾಗುತ್ತಿದೆ.

ಇದಕ್ಕೂ ಮೊದಲು ಅಂಬರೀಶ್ ಗೆ ಮಂಡ್ಯದ ಮಣ್ಣಿನ ತಿಲಕವಿಟ್ಟು ಪತ್ನಿ ಸುಮಲತಾ ಅಗಲಿದ ಪತಿಗೆ ಗೌರವ ಸಮರ್ಪಿಸಿದ್ದಾರೆ. ಬಳಿಕ ಮಂಡ್ಯದ ಜನತೆಗೆ ಸುಮಲತಾ ಹಾಗೂ ಪುತ್ರ ಅಭಿಷೇಕ್ ಕೈ ಮುಗಿದು ನಮನ ಸಲ್ಲಿಸಿದರು. ಕೆಲವೇ ಕ್ಷಣಗಳಲ್ಲಿ ಅಂಬರೀಶ್ ಪಾರ್ಥಿವ ಶರೀರ ಬೆಂಗಳೂರು ತಲುಪಲಿದ್ದು, ಬಳಿಕ ಆಂಬ್ಯುಲೆನ್ಸ್ ಮೂಲಕ ಕಂಠೀರವ ಸ್ಟೇಡಿಯಂನತ್ತ ತೆರಳಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಅಂಬರೀಶ್ ಅಂತ್ಯಕ್ರಿಯೆ ಮತ್ತಷ್ಟು ವಿಳಂಬ: ಕಾರಣವೇನು ಗೊತ್ತಾ?