Webdunia - Bharat's app for daily news and videos

Install App

ಸಿಗದ ಆಂಬುಲೆನ್ಸ್‌, ತಂದೆಯ ಮೃತದೇಹವನ್ನು ಬೈಕ್‌ನಲ್ಲೇ ಸಾಗಿಸಿದ ಮಕ್ಕಳು

Sampriya
ಬುಧವಾರ, 18 ಸೆಪ್ಟಂಬರ್ 2024 (19:38 IST)
Photo Courtesy X
ತುಮಕೂರು: ಸಮಯಕ್ಕೆ ಸರಿಯಾಗಿ ಆಂಬುಲೆನ್ಸ್‌ ಸಿಗದ ಕಾರಣ ತಮ್ಮ ತಂದೆಯ ಶವವನ್ನು ಸಹೋದರರು ಬೈಕ್‌ನಲ್ಲೇ ಸಾಗಿಸಿದ ಹೃದಯ ವಿದ್ರಾಹಕ ಘಟನೆ ಪಾವಗಡ ತಾಲ್ಲೂಕಿನ ವೈ.ಎನ್‌.ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

ವೈ.ಎನ್.ಹೊಸಕೋಟೆ ಹೋಬಳಿ ದಳವಾಯಿ ಗ್ರಾಮದ ಗುಡುಕಲ್ಲು ಹೊನ್ನೂರಪ್ಪ (80) ಅವರು ಬುಧವಾರ ಮಧ್ಯಾಹ್ನ ಆರೋಗ್ಯದಲ್ಲಿ ಏರುಪೇರಾಗಿ, ಚಿಕಿತ್ಸೆಗಾಗಿ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು. ವೈದ್ಯರು ಪರಿಶೀಲಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದರು.

ಇನ್ನೂ ಆಂಬುಲೆನ್ಸ್‌ಗಾಗಿ ಆಸ್ಪತ್ರೆಯಲ್ಲಿ ವಿಚಾರಿಸಿದ್ದಾರೆ. ಆದರೆ ವಾಹನ ಇಲ್ಲದಿರುವುದು ಗಮನಕ್ಕೆ ಬಂದು ತಕ್ಷಣವೇ 108 ಆಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ. ಆದರೆ ಚಾಲಕರು 'ನಮಗೆ ಶವ ಸಾಗಿಸಲು ಅವಕಾಶ ಇಲ್ಲ' ಎಂದು ಹೇಳಿದ್ದಾರೆ. ಇದರಿಂದ ಸಹೋದರರು ಆಸ್ಪತ್ರೆಯಿಂದ ಸುಮಾರು 5 ಕಿ.ಮೀ ದೂರದಲ್ಲಿರುವ ಗ್ರಾಮಕ್ಕೆ ಬೈಕ್‌ನಲ್ಲೇ ಮೃತದೇಹ ಸಾಗಿಸಿದ್ದಾರೆ.

ಇದನ್ನು ನೋಡಿದ ಗ್ರಾಮಸ್ಥರು ಆರೋಗ್ಯ ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments