ಜನ ದಂಗೆ ಏಳುವ ಮುನ್ನಾ ವಕ್ಫ್‌ ಕಾಯ್ದೆಯಲ್ಲಿ ತಿದ್ದುಪಡಿ ತನ್ನಿ: ಆರ್‌ ಅಶೋಕ್‌

Sampriya
ಶನಿವಾರ, 9 ನವೆಂಬರ್ 2024 (15:17 IST)
ಬೆಂಗಳೂರು: ಕೃಷಿ ಜಮೀನು, ಸ್ಮಶಾನ, ದೇವಸ್ಥಾನಗಳು, ಮಠ-ಮಾನ್ಯಗಳು, ಕೆರೆಗಳು ಎಲ್ಲಕ್ಕೂ ನೋಟಿಸ್ ನೀಡಿದ್ದಾಯ್ತು, ಈಗ ನಾಡಪ್ರಭು ಕೆಂಪೇಗೌಡರು ಕಟ್ಟಿದ ನಮ್ಮೆಲ್ಲರ ಹೆಮ್ಮೆಯ ಬೆಂಗಳೂರು ನಗರದ ಮೇಲೆ ವಕ್ಫ್ ಬೋರ್ಡ್ ನ ವಕ್ರದೃಷ್ಟಿ  ಬಿದ್ದಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಹೇಳಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ನಮ್ಮ ಬೆಂಗಳೂರಿನ ಹೃದಯ ಭಾಗವಾದ ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಬಳೆ ಪೇಟೆ, ಕಾಟನ್ ಪೇಟೆ ಕೂಡಾ ನಮ್ಮದೇ ಆಸ್ತಿ ಎಂದು ವಕ್ಫ್ ಬೋರ್ಡ್ ಹೇಳುತ್ತಿದೆ.

ಸಿಎಂ ಸಿದ್ದರಾಮಯ್ಯನವರೇ, ವಕ್ಫ್ ಆಸ್ತಿ ಹೆಸರಿನಲ್ಲಿ ನಡೆಯುತ್ತಿರುವ ದಬ್ಬಾಳಿಕೆ ದಿನಕಳೆದಂತೆ ಗಂಭೀರ ಸ್ವರೂಪ ಪಡೆಯುತ್ತಿದ್ದು, ಇದಕ್ಕೆ ಆದಷ್ಟು ಬೇಗ ಲಗಾಮು ಹಾಕದಿದ್ದರೆ ಜನ ದಂಗೆ ಎದ್ದು ದೊಡ್ಡ ಕಾನೂನು ಸುವ್ಯವಸ್ಥೆ ಸಮಸ್ಯೆಯಾಗುವುದು ನಿಶ್ಚಿತ.

ಈ ಕೂಡಲೇ ವಿಧಾನಮಂಡಲದ ವಿಶೇಷ ಅಧಿವೇಶನ ಕರೆದು ಈ ಬಗ್ಗೆ ಚರ್ಚೆಗೆ ಅವಕಾಶ ಮಾಡಿಕೊಡಿ. ವಕ್ಫ್ ಕಾಯ್ದೆಗೆ ಸೂಕ್ತ ತಿದ್ದುಪಡಿ ತರುವ ಮೂಲಕ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವತ್ತ ಗಮನ ಹರಿಸಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments