ಮೋದಿ ಹೇಳಿಕೆ ಶ್ಲಾಘಿಸಿದ ಅಮೆರಿಕಾ

Webdunia
ಶನಿವಾರ, 19 ನವೆಂಬರ್ 2022 (17:55 IST)
ಇಂಡೋನೇಷ್ಯಾದ ಬಾಲಿಯಲ್ಲಿ ಮುಕ್ತಾಯಗೊಂಡ ಜಿ20 ರಾಷ್ಟ್ರಗಳ ಶೃಂಗಸಭೆಯಲ್ಲಿ ಮಾಡಿದ್ದ ಘೋಷಣೆಗಳ ಮಾತುಕತೆಗೆ ಭಾರತ ಪ್ರಮುಖ ಪಾತ್ರ ವಹಿಸಿತ್ತು ಎಂದು ಅಮೆರಿಕದ ಶ್ವೇತಭವನ ಹೇಳಿದೆ. ನಿನ್ನೆ ಹೇಳಿಕೆ ಬಿಡುಗಡೆ ಮಾಡಿರುವ ಶ್ವೇತಭವನ, ಇಂದಿನ ಯುಗ ಯುದ್ಧದಿಂದ ಕೂಡಿರಬಾರದು ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದು, ಉಕ್ರೇನ್-ರಷ್ಯಾ ಯುದ್ಧ ಸಂಬಂಧ ಮೋದಿಯವರ ಹೇಳಿಕೆ ಬಗ್ಗೆ ಶ್ಲಾಘಿಸಿದೆ. ಶೃಂಗಸಭೆಯ ಘೋಷಣೆಯ ಮಾತುಕತೆಗೆ ಭಾರತ ಪ್ರಮುಖ ಪಾತ್ರ ವಹಿಸಿದೆ. ಇಂದಿನ ಯುಗವು ಯುದ್ಧದಿಂದ ಕೂಡಿರಬಾರದು ಎಂದು ಎಂದು ಪ್ರಧಾನಿ ಮೋದಿ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ನಿನ್ನೆ ಶ್ವೇತಭವನದಲ್ಲಿ ನಡೆದ ಸುದ್ದಿಗೋಷ್ಠಿ ವೇಳೆ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ಸುದ್ದಿಗಾರರಿಗೆ ಹೇಳಿದರು. ಜಾಗತಿಕ ಆರ್ಥಿಕತೆಯನ್ನು ನಿರ್ಮಿಸುವ ನಮ್ಮ ಪ್ರಯತ್ನಗಳನ್ನು ಮುಂದುವರಿಸುವಾಗ ಪ್ರಸ್ತುತ ಆಹಾರ ಮತ್ತು ಇಂಧನ ಭದ್ರತೆ ಸವಾಲುಗಳನ್ನು ಎದುರಿಸಲು ನಮ್ಮ ಹಾದಿ ಮುಂದುವರಿಯಬೇಕಿದೆ ಎಂದು ನಾವು ಶೃಂಗಸಭೆಯಲ್ಲಿ ಆದ್ಯತೆ ನೀಡಿದ್ದೇವೆ ಎಂದರು. ಅಮೆರಿಕ ಅಧ್ಯಕ್ಷ ಜೋ ಬೈಡನ್ ಇಂಡೋನೇಷ್ಯಾದಿಂದ ಮೊನ್ನೆ ಗುರುವಾರ ವಾಪಸ್ಸಾಗಿದ್ದರು. ಮುಂದಿನ ವರ್ಷ 2023ರ ಡಿಸೆಂಬರ್ ನಲ್ಲಿ ನಡೆಯಲಿರುವ ಜಿ20 ಶೃಂಗಸಭೆಯ ಆತಿಥ್ಯವನ್ನು ಭಾರತ ವಹಿಸಲಿದೆ. ಪ್ರಧಾನಿ ಮೋದಿಯವರ ಸಂಬಂಧವು ಇಂಡೋನೇಷ್ಯಾದ ಶೃಂಗಸಭೆ, ಮುಂದಿನ ವರ್ಷ ಬಾಲಿಯಲ್ಲಿ ನಡೆಯಲಿರುವ ಸಭೆಗೆ ನಿರ್ಣಾಯಕವಾಗಿದೆ ಎಂದು ಜೀನ್-ಪಿಯರ್ ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರದೀಪ್ ಈಶ್ವರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಬಿಜೆಪಿ, ಕಾರಣ ಇಲ್ಲಿದೆ

ತಮಿಳುನಾಡು ವಿಧಾನಸಭಾ ಚುನಾವಣೆ: ಗೃಹೋಪಯೋಗಿ ಕೂಪನ್‌ ಪ್ರಕಟಿಸಿದ ಉದಯನಿಧಿ ಸ್ಟಾಲಿನ್, ಎಷ್ಟು ಹಣ ಗೊತ್ತಾ

ಪ್ಲಾಟ್‌ಫಾರ್ಮ್‌ನಲ್ಲಿ ನಿಂತವರ ಮೇಲೆಯೇ ಎರಗಿದ ಬಸ್‌, ಎದೆ ಝಲ್ಲೆನಿಸುತ್ತದೆ, Video

ಅಹಿಂದ ಹೆಸರಲ್ಲಿ ಪ್ರಚಾರ ಪಡೆದ ಸಿದ್ದರಾಮಯ್ಯ ಅವರಿಗಾಗಿ ಏನೂ ಮಾಡಿಲ್ಲ: ಸುನಿಲ್ ಕುಮಾರ್‌

ತಪ್ಪಿಗಾಗಿ ಪ್ರತಿಭಟನಕಾರರಲ್ಲಿ ಕಿವಿ ಹಿಟ್ಟು ಕ್ಷಮೆ ಕೇಳಿದ್ದ ಐಎಎಸ್ ಅಧಿಕಾರಿ ರಿಂಕು ಸಿಂಗ್ ರಾಜೀನಾಮೆ

ಮುಂದಿನ ಸುದ್ದಿ
Show comments