Webdunia - Bharat's app for daily news and videos

Install App

ಮೋದಿ ಹೇಳಿಕೆ ಶ್ಲಾಘಿಸಿದ ಅಮೆರಿಕಾ

Webdunia
ಶನಿವಾರ, 19 ನವೆಂಬರ್ 2022 (17:55 IST)
ಇಂಡೋನೇಷ್ಯಾದ ಬಾಲಿಯಲ್ಲಿ ಮುಕ್ತಾಯಗೊಂಡ ಜಿ20 ರಾಷ್ಟ್ರಗಳ ಶೃಂಗಸಭೆಯಲ್ಲಿ ಮಾಡಿದ್ದ ಘೋಷಣೆಗಳ ಮಾತುಕತೆಗೆ ಭಾರತ ಪ್ರಮುಖ ಪಾತ್ರ ವಹಿಸಿತ್ತು ಎಂದು ಅಮೆರಿಕದ ಶ್ವೇತಭವನ ಹೇಳಿದೆ. ನಿನ್ನೆ ಹೇಳಿಕೆ ಬಿಡುಗಡೆ ಮಾಡಿರುವ ಶ್ವೇತಭವನ, ಇಂದಿನ ಯುಗ ಯುದ್ಧದಿಂದ ಕೂಡಿರಬಾರದು ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದು, ಉಕ್ರೇನ್-ರಷ್ಯಾ ಯುದ್ಧ ಸಂಬಂಧ ಮೋದಿಯವರ ಹೇಳಿಕೆ ಬಗ್ಗೆ ಶ್ಲಾಘಿಸಿದೆ. ಶೃಂಗಸಭೆಯ ಘೋಷಣೆಯ ಮಾತುಕತೆಗೆ ಭಾರತ ಪ್ರಮುಖ ಪಾತ್ರ ವಹಿಸಿದೆ. ಇಂದಿನ ಯುಗವು ಯುದ್ಧದಿಂದ ಕೂಡಿರಬಾರದು ಎಂದು ಎಂದು ಪ್ರಧಾನಿ ಮೋದಿ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ನಿನ್ನೆ ಶ್ವೇತಭವನದಲ್ಲಿ ನಡೆದ ಸುದ್ದಿಗೋಷ್ಠಿ ವೇಳೆ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ಸುದ್ದಿಗಾರರಿಗೆ ಹೇಳಿದರು. ಜಾಗತಿಕ ಆರ್ಥಿಕತೆಯನ್ನು ನಿರ್ಮಿಸುವ ನಮ್ಮ ಪ್ರಯತ್ನಗಳನ್ನು ಮುಂದುವರಿಸುವಾಗ ಪ್ರಸ್ತುತ ಆಹಾರ ಮತ್ತು ಇಂಧನ ಭದ್ರತೆ ಸವಾಲುಗಳನ್ನು ಎದುರಿಸಲು ನಮ್ಮ ಹಾದಿ ಮುಂದುವರಿಯಬೇಕಿದೆ ಎಂದು ನಾವು ಶೃಂಗಸಭೆಯಲ್ಲಿ ಆದ್ಯತೆ ನೀಡಿದ್ದೇವೆ ಎಂದರು. ಅಮೆರಿಕ ಅಧ್ಯಕ್ಷ ಜೋ ಬೈಡನ್ ಇಂಡೋನೇಷ್ಯಾದಿಂದ ಮೊನ್ನೆ ಗುರುವಾರ ವಾಪಸ್ಸಾಗಿದ್ದರು. ಮುಂದಿನ ವರ್ಷ 2023ರ ಡಿಸೆಂಬರ್ ನಲ್ಲಿ ನಡೆಯಲಿರುವ ಜಿ20 ಶೃಂಗಸಭೆಯ ಆತಿಥ್ಯವನ್ನು ಭಾರತ ವಹಿಸಲಿದೆ. ಪ್ರಧಾನಿ ಮೋದಿಯವರ ಸಂಬಂಧವು ಇಂಡೋನೇಷ್ಯಾದ ಶೃಂಗಸಭೆ, ಮುಂದಿನ ವರ್ಷ ಬಾಲಿಯಲ್ಲಿ ನಡೆಯಲಿರುವ ಸಭೆಗೆ ನಿರ್ಣಾಯಕವಾಗಿದೆ ಎಂದು ಜೀನ್-ಪಿಯರ್ ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments