Webdunia - Bharat's app for daily news and videos

Install App

ತಾಜ್ ಮಹಲ್ ಪ್ರವೇಶಿಸಿದ ಮೊದಲ ಉತ್ತರಪ್ರದೇಶದ ಬಿಜೆಪಿ ಸಿಎಂ

Webdunia
ಗುರುವಾರ, 26 ಅಕ್ಟೋಬರ್ 2017 (13:17 IST)
ಆಗ್ರಾ: ಐತಿಹಾಸಿಕ ಸ್ಥಳ ತಾಜ್ ಮಹಲ್ ಕುರಿತು ಒಬ್ಬೊಬ್ಬರು ಒಂದೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಸಿಎಂ ಯೋಗಿ ಆದಿತ್ಯನಾಥ್‌ ಇಂದು ತಾಜ್ ಗೆ ಭೇಟಿ ನೀಡಿದ್ದಾರೆ. ಆದಿತ್ಯನಾಥ್‌ ಅವರು ತಾಜ್‌ಮಹಲ್‌ ಪ್ರವೇಶಿಸಿದ ಉತ್ತರಪ್ರದೇಶದ ಪ್ರಥಮ ಬಿಜೆಪಿ ಸಿಎಂ ಎನಿಸಿಕೊಂಡಿದ್ದಾರೆ.

ತಾಜ್‌ ಭೇಟಿ ಸಂದರ್ಭದಲ್ಲಿ ಸಿಎಂ ಯೋಗಿ ಸೌಧದ ಒಳಗಿನ ಎಲ್ಲಾ ಪ್ರದೇಶಗಳನ್ನು ವೀಕ್ಷಿಸಲಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವನೀಶ್‌ ತಿಳಿಸಿದ್ದಾರೆ.

ಸಿಎಂ ಭೇಟಿಗೂ ಮೊದಲು ತಾಜ್‌ ಸುತ್ತಲೂ ನೂರಾರು  ಬಿಜೆಪಿ ಕಾರ್ಯಕರ್ತರು ಮತ್ತು ಸಮಾಜ ಸೇವಕರು ಸ್ವಚ್ಛತಾ ಆಂದೋಲನಾ ನಡೆಸುತ್ತಿದ್ದಾರೆ. ಆಗ್ರಾದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಯೋಗಿ ಚಾಲನೆ ನೀಡಲಿದ್ದಾರೆ. ಆಗ್ರಾದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಬರೋಬ್ಬರಿ 370 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದ್ದಾರೆ.

ಪ್ರೇಮ ಸ್ಮಾರಕವಾಗಿರುವ 17ನೇ ಶತಮಾನದ ವಿಶ್ವ ಪ್ರಸಿದ್ಧ ಮೊಘಲ್‌ ಕಾಲದ ತಾಜ್‌ ಮಹಲ್‌, ಶಿವ ದೇವಾಲಯಗಿತ್ತು ಎಂದು ಸಾಬೀತು ಪಡಿಸುವುದಕ್ಕೆ ಯಾವುದೇ ದೃಢವಾದ ಸಾಕ್ಷ್ಯಾಧಾರಗಳು ಇಲ್ಲವೆಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿತ್ತು. 1983ರಲ್ಲಿ ಯುನೆಸ್ಕೋ ತಾಜ್‌ಮಹಲ್‌ ವಿಶ್ವ ಪಾರಂಪರಿಕ ತಾಣವೆಂದು ಮಾನ್ಯತೆ ನೀಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಅತ್ಯಾಚಾರ ಪ್ರಕರಣ: ಇದೇ 30ರಂದು ಪ್ರಜ್ವಲ್ ರೇವಣ್ಣಗೆ ಜಾಮೀನಾ, ಜೈಲಾ, ಮಹತ್ವದ ತೀರ್ಪು

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ನೂರಾರು ಹುಡುಗರ ಗುಂಪೊಂದು ಹಾವು ಹಿಡಿದು ಗುಡ್ಡವೇರಿದ ವಿಡಿಯೋ, ಭಯಾನಕವಾಗಿರುವ ಸಂಪ್ರದಾಯದ ಹಿಂದಿದೆ ನಂಬಿಕೆ

ಮುಂದಿನ ಸುದ್ದಿ
Show comments