Webdunia - Bharat's app for daily news and videos

Install App

ಆದಿಚುಂಚನಗಿರಿಮಠಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ

Webdunia
ಭಾನುವಾರ, 13 ಆಗಸ್ಟ್ 2017 (12:19 IST)
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.
 
ಮಠದ ನಿರ್ಮಲಾನಂದ ಶ್ರೀಗಳು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಮಠಕ್ಕೆ ಸ್ವಾಗತಿಸಿದರು. ಅಮಿತ್ ಶಾ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಿಎಂ ಸದಾನಂದಗೌಡ ಸೇರಿದಂತೆ ಹಿರಿಯ ಮುಖಂಡರು ಸಾಥ್ ನೀಡಿದರು.
 
ರಾಜ್ಯಕ್ಕೆ ಮೂರು ದಿನಗಳ ಭೇಟಿಗಾಗಿ ಆಗಮಿಸಿರುವ ಶಾ, ನಿನ್ನೆ ಬಿಜೆಪಿ ಪಕ್ಷದ ಹಲವಾರು ಸಭೆಗಳನ್ನು ನಡೆಸಿ ಮುಂಬರುವ ಚುನಾವಣೆಯ ಸಿದ್ದತೆಗಳ ಬಗ್ಗೆ ಪರಿಶೀಲನೆ ನಡೆಸಿದರು.
 
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಬಹುಮತ ಪಡೆದು ಸರಕಾರ ರಚಿಸಲೇಬೇಕು ಎನ್ನುವ ಗುರಿಯೊಂದಿಗೆ ಕಾರ್ಯನಿರ್ವಹಿಸುವಂತೆ ಅಮಿತ್ ಶಾ, ಪಕ್ಷದ ಮುಖಂಡರಿಗೆ ತಾಕೀತು ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments