ಅಮಿತ್ ಶಾ , ಸಿಎಂ ಭೇಟಿ ಇನ್ನೂ ಫೈನಲ್ ಆಗದ ಹಿನ್ನಲೆ; ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವುದು ಅನುಮಾನ

Webdunia
ಶುಕ್ರವಾರ, 31 ಜನವರಿ 2020 (11:05 IST)
ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ  ಅಮಿತ್ ಶಾ , ಸಿಎಂ ಭೇಟಿ ಇನ್ನೂ ಫೈನಲ್ ಆಗದ ಹಿನ್ನಲೆಯಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವುದು ಅನುಮಾನ ಎನ್ನಲಾಗಿದೆ.

ಇಂದು ಬೆಳಿಗ್ಗೆ  9.30 ರಿಂದ 10 ಗಂಟೆಗೆ ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿತ್ತು, ಬಳಿಕ ಕರೆ ಮಾಡಿ ಭೇಟಿ ಸಮಯ ಬದಲಿಸಿದ್ದ ಅಮಿತ್ ಶಾ ಮಧ್ಯಾಹ್ನ 2 ರಿಂದ 3 ಗಂಟೆಗೆ ಭೇಟಿಗೆ ಸಮಯ ನೀಡಿದ್ದರು. ಆದರೆ ಈಗ ಮತ್ತೆ ಅಮಿತ್ ಶಾ ಕಾರ್ಯಕ್ರಮದ ಪಟ್ಟಿ ಬದಲಾವಣೆಯಾದ ಕಾರಣ ಅಮಿತ್ ಶಾ ಭೇಟಿಗೆ ಬಿಎಸ್ ವೈ ಗೆ ಅವಕಾಶ ಸಿಗುವುದೇ ಅನುಮಾನ ಎನ್ನಲಾಗಿದೆ.

 

ಬೆಳಿಗ್ಗೆ 11 ಗಂಟೆಗೆ ಅಮಿತ್ ಶಾ ಸಂಸತ್ ಜಂಟಿ ಅಧಿವೇಶನದಲ್ಲಿ ಭಾಗಿಯಾಗಲಿದ್ದು ಮಧ್ಯಾಹ್ನ 2 ಗಂಟೆಗೆ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 3.30ಕ್ಕೆ ಎನ್ ಡಿಎ ಮೈತ್ರಿಕೂಟದ ಸಭೆ ನಂತರ ದೆಹಲಿ ಚುನಾವಣಾ ಪ್ರಚಾರದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ. ಹೀಗಾಗಿ ಅಮಿತ್ ಶಾ ಭೇಟಿಗಾಗಿ ಬಿಎಸ್ ವೈ ಕರ್ನಾಟಕ ಭವನದಲ್ಲೇ ಕಾದು ಕುಳಿತಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments