Webdunia - Bharat's app for daily news and videos

Install App

ಚುನಾವಣೆ ಸಿದ್ಧತೆಗೆ 23 ಸೂತ್ರಗಳು ನೀಡಿದ ಅಮಿತ್ ಶಾ

Webdunia
ಬುಧವಾರ, 10 ಜನವರಿ 2018 (09:26 IST)

ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಯಬೇಕು ಎಂದು ಹಠತೊಟ್ಟಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯ ನಾಯಕರಿಗೆ ಚಳಿ ಬಿಡಿಸಿದ್ದಾರೆ.

ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಅವರು ಬೆಂಗಳೂರಿನಲ್ಲಿ ನಡೆಸಿದ ಸಭೆಯಲ್ಲಿ ಬಿಜೆಪಿಯ ನಾಯಕರಿಗೆ ಬಿಸಿ ಮುಟ್ಟಿಸಿರುವ ಅವರು, ಸೂಚನೆ ಎಂದು ಭಾವಿಸದೆ ಜವಾಬ್ದಾರಿ ಎಂದು ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.

ಈ ಬಾರಿ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಸಮೀಕ್ಷೆಗಳ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳಬೇಡಿ. ಮಾರ್ಚ್ 10ರೊಳಗೆ ಚುನಾವಣೆಗೆ ಸಿದ್ಧತೆ ಪೂರ್ಣಗೊಳಿಸಬೇಕು. ಅದಕ್ಕಾಗಿ 23 ಸೂತ್ರಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ವಾಸ್ತವ್ಯ ಸಹಿತ ಪ್ರವಾಸ, ಮತಗಟ್ಟೆಯಲ್ಲಿ ಪ್ರಮುಖರ ನೇಮಕ, ವಿಸ್ತೃತ ಸಭೆ, ಮತಗಟ್ಟೆಯ ಸಶಕ್ತಿಕರಣ, ಸದಸ್ಯತ್ವ ಮಾಡಿಸುವುದು, ಮಠ ಮಂದಿರದ ಪ್ರಮುಖರೊಂದಿಗೆ ಚರ್ಚೆ ನಡೆಸಬೇಕು. ಗೋಡೆ ಬರಹ ಬರೆಸುವುದು, ಪ್ರಣಾಳಿಕೆ, ಜಾರ್ಜ್ ಶೀಟ್, ವಾಟ್ಸಾಪ್ ಗ್ರೂಪ್, ಕ್ಷೇತ್ರ ವ್ಯಾಪ್ತಿಯಲ್ಲಿ ಕೋರ್ ಕಮಿಟಿ ರಚನೆ, ಬೂತ್ ಅಧ್ಯಕ್ಷರ ಮನೆ ಮೇಲೆ ಪಕ್ಷದ ಧ್ವಜ ಸೇರಿದಂತೆ 23 ಸೂತ್ರಗಳನ್ನು ಅಳವಡಿಸಿಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments