Webdunia - Bharat's app for daily news and videos

Install App

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಒಬ್ಬ ಕೊಲೆ ಆರೋಪಿ: ಸಿಎಂ ಸಿದ್ದರಾಮಯ್ಯ

Webdunia
ಸೋಮವಾರ, 28 ನವೆಂಬರ್ 2016 (13:24 IST)
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಒಬ್ಬ ಕೊಲೆ ಆರೋಪಿ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
 
ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿ ಆಗದಿದ್ರೆ, ಅಮಿತ್ ಶಾ ಜೈಲಿನಲ್ಲಿರಬೇಕಿತ್ತು. ಸಿಬಿಐನವರು ಅನುಕೂಲ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಅವರು ಹೋರಗಿದ್ದಾರೆ. ಅವರಿಗೆ ನಮ್ಮ ಸರಕಾರದ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.
 
ಭ್ರಷ್ಟರು ನೋಟು ಮುದ್ರಣ ಮಾಡುವ ಯಂತ್ರವನ್ನು ಮನೆಯಲ್ಲಿಯೇ ಇಟ್ಟುಕೊಂಡಿದ್ದಾರೆ. ನಮ್ಮ ಸರಕಾರದ ವಿರುದ್ಧ ಮಾತನಾಡುವ ಅಮಿತ್ ಶಾಗೆ ಏನು ಹೇಳುವುದು ಎಂದು ಪ್ರಶ್ನಿಸಿದರು.
 
ಮಹದಾಯಿ ಹಾಗೂ ಕಾವೇರಿ ನದಿ ನೀರು ಹಂಚಿಕೆ ವಿವಾದವನ್ನು ಕೇವಲ 4 ಗಂಟೆಯಲ್ಲಿ ಬಗೆಹರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಎಡಿಯೂರಪ್ಪ ಹೇಳಿದ್ದರು. ಇದೀಗ ಕೇಂದ್ರದಲ್ಲಿ ಅವರದ್ದೆ ಸರಕಾರವಿದೆ. ಆದರೂ ಸಹ ಅಂತರರಾಜ್ಯ ನದಿ ವಿವಾದವನ್ನು ಬೆಗೆಹರಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು
 
ಪ್ರಧಾನಿ ಮೋದಿ ಅವರ ಜನಪ್ರಿಯತೆ ಕುಗ್ಗುತ್ತಿದೆ. ಮುಂದಿನ ಚುನಾವಣೆಯಲ್ಲಿ ಅವರು ಹೀನಾಯ ಸೋಲು ಅನುಭವಿಸುವುದು ಶತಸಿದ್ಧ. ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments