Webdunia - Bharat's app for daily news and videos

Install App

ಅಮಿತ್ ಶಾ ಪುತ್ರನ ಆದಾಯದಲ್ಲಿ 16 ಸಾವಿರ ಪಟ್ಟು ಹೆಚ್ಚಳ: ಆರೋಪ ಸುಳ್ಳು ಎಂದ ಅನಂತ್ ಕುಮಾರ್

Webdunia
ಸೋಮವಾರ, 9 ಅಕ್ಟೋಬರ್ 2017 (17:50 IST)
ಅಮಿತ್ ಶಾ ಪುತ್ರನ ಬಗ್ಗೆ ವೆಬ್‌ಸೈಟ್ ಸುಳ್ಳುವರದಿ ಮಾಡಿದೆ. ವೆಬ್‌ಸೈಟ್ ವರದಿಯಲ್ಲಿ ಸತ್ಯಾಂಶವಿಲ್ಲ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ತಿರುಗೇಟು ನೀಡಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ, ರಾಜ್ಯದಲ್ಲಿ ಡರ್ಟಿ ಟ್ರಿಕ್ಸ್ ಡಿಪಾರ್ಟ್‌ಮೆಂಟ್ ಕಾರ್ಯನಿರ್ವಹಿಸುತ್ತಿದೆ. ಹಿಟ್ ಆಂಡ್ ರನ್ ಕೆಲಸ ಮಾಡುತ್ತಿದೆ ಎಂದು ಟೀಕಿಸಿದ್ದಾರೆ. 
 
ಕಾಂಗ್ರೆಸ್‌ನಿಂದ ಅಪಪ್ರಚಾರ ಮಾಡಲಾಗುತ್ತಿದೆ, ಕೆಲವರಿಂದ ಅಮಿತ್ ಶಾ ಪುತ್ರ ಜಯ್ ಶಾ ತೇಜೋವಧೆಗೆ ಪ್ರಯತ್ನ ಮಾಡಲಾಗುತ್ತಿದೆ. ಕೋರ್ಟ್‌ನ ಎಲ್ಲಾ ಪ್ರಶ್ನೆಗಳಿಗೆ ಅಮಿತ್ ಶಾ ಉತ್ತರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಒಬ್ಬ ಡೈನಾಮಿಕ್ ನಾಯಕ. ಬಿಜೆಪಿ ನಾಯಕರು ಸ್ವಚ್ಚ ರಾಜಕಾರಣ ಮಾಡುತ್ತಿದ್ದಾರೆ. ಮೂರುವರೆ ವರ್ಷಗಳಲ್ಲಿ ಯಾವುದೇ ಸಚಿವರ ಮೇಲೆ ಕಪ್ಪು ಚುಕ್ಕೆಯಿಲ್ಲ. ಇಂತಹ ಸ್ವಚ್ಚ ರಾಜಕಾರಣ ಮಾಡುತ್ತಿರುವುದಕ್ಕೆ ಹೆಮ್ಮೆಯಿದೆ ಎಂದರು.
 
500 ಕೋಟಿ ರೂಪಾಯಿ ಅವ್ಯವಹಾರವಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಜಾಮೀನು ಪಡೆದಿದ್ದಾರೆ. ಅಂತಹ ಭ್ರಷ್ಟ ರಾಜಕಾರಣ ನಾವು ಮಾಡುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
 
ವೆಬ್‌ಸೈಟ್‌ನಲ್ಲಿ ಅಮಿತ್ ಶಾ ಪುತ್ರ ಜಯ್ ಶಾ ಕಂಪೆನಿಯ ಆದಾಯ ಒಂದೇ ವರ್ಷದಲ್ಲಿ 50 ಸಾವಿರ ರೂಪಾಯಿಗಳಿಂದ 80 ಕೋಟಿಗೆ ಏರಿಕೆಯಾಗಿದ್ದು 16,000 ಪಟ್ಟು ಹೆಚ್ಚಾಗಿದೆ ಎಂದು ವರದಿ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments