Publish Date: Thu, 29 Dec 2022 (10:47 IST)
Updated Date: Thu, 29 Dec 2022 (11:21 IST)
ಮಂಡ್ಯ : ಇಂದಿನಿಂದ ಕೇಂದ್ರ ಗೃಹಸಚಿವ ಅಮಿತ್ ಶಾ 3 ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ರಾಜ್ಯ ಬಿಜೆಪಿ ಶಾ ಪ್ರವಾಸದಿಂದಲೇ ಚುನಾವಣಾ ರಣತಂತ್ರವನ್ನು ಆರಂಭಿಸಿದೆ.
ಮಂಡ್ಯದಿಂದಲೇ ಅಮಿತ್ ಶಾ ಚುನಾವಣೆಗೆ ರಣಕಹಳೆ ಊದಲಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಬಿಜೆಪಿ ಮತಬೇಟೆ ಆರಂಭಿಸಿದೆ. ಇಂದಿನಿಂದ ಅಮಿತ್ ಶಾ ಮೂರು ದಿನಗಳ ಕಾಲ ರಾಜ್ಯಪ್ರವಾಸವನ್ನು ಕೈಗೊಳ್ಳುತ್ತಿದ್ದಾರೆ.
ಇಂದು ಬೆಂಗಳೂರಿಗೆ ಅಮಿತ್ ಶಾ ಬರಲಿದ್ದು, ನಾಳೆ ಸಕ್ಕರೆನಾಡಲ್ಲಿ ಬಿಜೆಪಿಯ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಮಾವೇಶದಲ್ಲಿ ಬರೋಬ್ಬರಿ 1 ಲಕ್ಷ ಮಂದಿಯನ್ನು ಸೇರಿಸಿ ಚುನಾವಣಾ ಕಹಳೆ ಮೊಳಗಿಸಲು ವೇದಿಕೆ ಸಿದ್ಧವಾಗಿದೆ.