Select Your Language

Notifications

webdunia
webdunia
webdunia
webdunia

ಅಮಿತ್ ಶಾ ಯಾವುದೇ ಕಾರಣಕ್ಕೂ ಮಂಗಳೂರಿಗೆ ಆಗಮಿಸಬಾರದು- ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ

ಅಮಿತ್ ಶಾ ಯಾವುದೇ ಕಾರಣಕ್ಕೂ ಮಂಗಳೂರಿಗೆ ಆಗಮಿಸಬಾರದು- ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ
ಮಂಗಳೂರು , ಮಂಗಳವಾರ, 7 ಜನವರಿ 2020 (10:23 IST)
ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಯಾವುದೇ ಕಾರಣಕ್ಕೂ ಮಂಗಳೂರಿಗೆ ಆಗಮಿಸಬಾರದು ಎಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಹೇಳಿದ್ದಾರೆ.


ಪೌರತ್ವ ತಿದ್ದಪಡಿ ಕಾಯ್ದೆ ಕುರಿತು ಜಾಗೃತಿ ಮೂಡಿಸಲು ಮಂಗಳೂರಿನಲ್ಲಿ ಜನವರಿ 19 ರಂದು  ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಈ ಸಮಾವೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ ಎನ್ನಲಾಗಿದೆ.

 

ಈ ಬಗ್ಗೆ ಕಾಂಗ್ರೆಸ್ ನವರು ಆಕ್ರೋಶ ವ್ಯಕ್ತಪಡಿಸಿದ್ದು, ಹಿಂಸಾಚಾರ, ಗೋಲಿಬಾರ್ ಬಳಿಕ ಮಂಗಳೂರು ಇದೀಗ ಸಹಜ ಸ್ಥಿತಿಗೆ ಮರಳುತ್ತಿದೆ. ಇದರ ನಡುವೆ ಅಮಿತ್ ಶಾ ಆಗಮಿಸಿ ಮತ್ತೆ ತೊಂದರೆ ಮಾಡುವುದು ಬೇಡ.  ಅಮಿತ್ ಶಾ ಯಾವುದೇ ಕಾರಣಕ್ಕೂ ಮಂಗಳೂರಿಗೆ ಆಗಮಿಸಬಾರದು. ಒಂದು ವೇಳೆ ಆಗಮಿಸಿದರೆ  ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ, ಉಪವಾಸ ಕೂರುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಎಚ್ಚರಿಕೆ ನೀಡಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನದ ಬಗ್ಗೆ ಅಪಸ್ವರ