Webdunia - Bharat's app for daily news and videos

Install App

ಅಮಿತ್ ಶಾ ಅ ವರಿಗೆ ಇಂಗ್ಲಿಷ್ ಬರಲ್ವ?:ಎಚ್‌ಡಿಕೆ

Webdunia
ಶನಿವಾರ, 9 ಏಪ್ರಿಲ್ 2022 (20:31 IST)
ಬೆಂಗಳೂರು: ನಾನು, ಹಿರಿಯ ಸಾಹಿತಿ ಕುಂ ವೀರಭದ್ರಪ್ಪ  ಸೇರಿದಂತೆ 61 ಜನರಿಗೆ ಸಹಿಷ್ಣು ಹಿಂದೂ ಎಂಬ ಹೆಸರಿನಲ್ಲಿ ಒಡ್ಡಲಾಗಿರುವ ಜೀವ ಬೆದರಿಕೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರವನ್ನು ಒತ್ತಾಯ ಮಾಡಿದರು.
 
ಈ ಬಗ್ಗೆ ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಇಂತಹ ಬೆದರಿಕೆ ಪತ್ರವನ್ನು ಲಘುವಾಗಿ ಪರಿಗಣಿಸಬೇಡಿ. ಕುಂ.ವೀರಭದ್ರಪ್ಪ ಸೇರಿ ಜೀವ ಬೆದರಿಕೆ ಒಡ್ಡಲಾಗಿರುವ ಎಲ್ಲ ಸಾಹಿತಿಗಳಿಗೆ ತಕ್ಷಣವೇ ಸರಕಾರವು ರಕ್ಷಣೆ ಕೊಡಬೇಕು ಎಂದು ಆಗ್ರಹಪಡಿಸಿದರು.
 
ದೇವರನ್ನು ನಾನು ನಂಬಿರುವೆ: ನನಗೆ ಈ ವಿಚಾರದಲ್ಲಿ ಅಂಜಿಕೆ ಇಲ್ಲ. ದೇವರನ್ನು ನಾನು ನಂಬಿರುವೆ. ನನ್ನ ನಿಲುವಿನಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಅಂಜಿ ಸತ್ಯವನ್ನು ಮರೆಮಾಚಲಾರೆ. ಹಣೆಯಲ್ಲಿ ಬರೆದಿರುವುದನ್ನು ತಿದ್ದಲು ಇವರಿಂದ ಆಗುವುದಿಲ್ಲ ಎಂದ ಅವರು, ನೇರವಾಗಿ ಮಾತನಾಡುತ್ತಿದ್ದರು ಎಂಬ ಕಾರಣಕ್ಕೆ ಎಂ ಎಂ ಕಲಬುರ್ಗಿ ಸೇರಿ ಕೆಲವರನ್ನು ಹತ್ಯೆ ಮಾಡಿದ ಉದಾಹರಣೆ ನಮ್ಮ ಮುಂದೆ ಇದೆ. ರಾಜ್ಯದಲ್ಲಿ ಮತ್ತೆ ಅಂಥ ಘಟನೆಗಳು ಮರುಕಳಿಸಬಾರದು ಎಂದು ಅವರು ಹೇಳಿದರು.
 
ಅಮಿತ್ ಶಾ ಅ ವರಿಗೆ ಇಂಗ್ಲಿಷ್ ಬರಲ್ವ?: ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಎಂದು ಪ್ರಶ್ನಿಸಿದ ಅವರು, ಹಿಂದಿ ಹೇರಿಕೆ ವಿರುದ್ದ ಅಭಿಯಾನಕ್ಕೆ ನನ್ನ ಬೆಂಬಲ ಇದೆ.ಕನ್ನಡ ನಾಡಿನಲ್ಲಿ ಕನ್ನಡ ದೊಡ್ಡದು. ಇಲ್ಲಿ ಹಿಂದಿ ಹೇರಿಕೆ ನಡೆಯಲ್ಲ. ಕನ್ನಡ ಉಳಿಸಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದರು. ಹಿಂದಿ ಹೇರಿಕೆ ಬಗ್ಗೆ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

Shocking video: ನೆಗಡಿ ಎಂದು ಬಂದ ಪುಟ್ಟ ಮಗುವಿಗೆ ಸಿಗರೇಟು ಸೇದಲು ಹೇಳಿಕೊಟ್ಟ ವೈದ್ಯ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments