Webdunia - Bharat's app for daily news and videos

Install App

ಅಮಿತ್ ಶಾ ರಾಜ್ಯದಲ್ಲಿಯೇ ಠಿಕಾಣಿ ಹೂಡಲಿ, ನಷ್ಟವಿಲ್ಲ: ಸಿಎಂ ವಾಗ್ದಾಳಿ

Webdunia
ಭಾನುವಾರ, 13 ಆಗಸ್ಟ್ 2017 (13:04 IST)
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೇಕಿದ್ದಲ್ಲಿ ಕರ್ನಾಟಕದಲ್ಲಿಯೇ ಠಿಕಾಣಿ ಹೂಡಲಿ. ಕಾಂಗ್ರೆಸ್‌ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವೀರಶೈವ -ಲಿಂಗಾಯುತ ಪ್ರತ್ಯೇಕ ಧರ್ಮ ವಿಚಾರ ಕುರಿತಂತೆ ಬಿಜೆಪಿಯವರು ಕತ್ತರಿ ಇಟ್ಟುಕೊಂಡು ಸಮಾಜ ಒಡೆಯುತ್ತಿದ್ದಾರೆ. ಸಮಾಜವನ್ನು ಒಡೆಯುವುದೇ ಬಿಜೆಪಿಯ ಕಾಯಕವಾಗಿದೆ ಎಂದು ಆರೋಪಿಸಿದರು. 
 
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸಗಳ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತವಾಗಿದೆ. ಪ್ರಧಾನಿ ಮೋದಿ ಸರಕಾರ ಅಧಿಕಾರ ದುರುಪಯೋಗಪಡಿಸಿಕೊಂಡು ವಿಪಕ್ಷಗಳನ್ನು ನಿರ್ನಾಮ ಮಾಡಲು ಯತ್ನಿಸುತ್ತಿದೆ ಎಂದು ಕಿಡಿಕಾರಿದರು.
 
ಕಾಂಗ್ರೆಸ್ ಪಕ್ಷದ ಸರಕಾರ ಚುನಾವಣೆ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳಲ್ಲಿ ಶೇ.80 ರಷ್ಟು ಭರವಸೆಗಳನ್ನು ಈಡೇರಿಸಿದೆ. ಇನ್ನುಳಿದ ಶೇ.20 ರಷ್ಟು ಭರವಸೆಗಳನ್ನು ಪ್ರಸಕ್ತ ವರ್ಷದಲ್ಲಿ ಈಡೇರಿಸಲಾಗುವುದು ಎಂದು ತಿಳಿಸಿದ್ದಾರೆ.
 
ಮಹದಾಯಿ, ಎತ್ತಿನಹೊಳೆ, ಕಾವೇರಿ ವಿವಾದ ಸೇರಿದಂತೆ ಹಲವಾರು ರಾಜ್ಯ ನೀರಾವರಿ ಯೋಜನೆಗಳ ಬಗ್ಗೆ ಮಧ್ಯಸ್ಥಿಕೆ ವಹಿಸದೆ ರೈತರನ್ನು ಕಂಗಾಲನ್ನಾಗಿಸಿದ ಬಿಜೆಪಿ ನಾಯಕರು ಇದೀಗ ರೈತರನ್ನು ಓಲೈಸಲು ಬಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments