Webdunia - Bharat's app for daily news and videos

Install App

ಪ್ರಚೋದನೆ ಮಾಡಲು ಅಮಿತ್ ಶಾ ಕರ್ನಾಟಕಕ್ಕೆ : ದಿನೇಶ್ ಗುಂಡೂರಾವ್

Webdunia
ಭಾನುವಾರ, 13 ಆಗಸ್ಟ್ 2017 (13:12 IST)
ವಿಸ್ತಾರಕರಿಂದ ಮನೆ ಮನೆಗೆ ಸುಳ್ಳು ವದಂತಿಗಳನ್ನು ಮುಟ್ಟಿಸಿ, ಜನರಿಗೆ ಪ್ರಚೋದನೆ ಮಾಡಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.  
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅತ್ಯಂತ ಕೆಳಮಟ್ಟಕ್ಕೆ ಹೋಗಿರುವ ಬಿಜೆಪಿಯನ್ನು ಮೇಲೆತ್ತಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
 
ಸಾಲ ಮನ್ನಾ ಮಾಡಿ ಅಂತ ಬಿಜೆಪಿಯವರು ರಾಜ್ಯ ಸರಕಾರದ ವಿರುದ್ಧ ಬೊಬ್ಬೆ ಹಾಕಿದರು. ಅಮಿತ್ ಶಾ ನಿಜವಾಗಿ ಜನತೆಯ ಪರವಾಗಿದ್ದಲ್ಲಿ ಕೇಂದ್ರ ಸರಕಾರದಿಂದ ರೈತರ ಸಾಲ ಮನ್ನಾ ಮಾಡಿಸಲಿ ಎಂದು ಸವಾಲ್ ಹಾಕಿದರು.
 
ಉತ್ತರಪ್ರದೇಶದಲ್ಲಿ ಹಿಂದು- ಮುಸ್ಲಿ ಸಮದಾಯಗಳನ್ನು ವಿಭಜಿಸಿ, ಪಕ್ಷವನ್ನು ಅಧಿಕಾರಕ್ಕೆ ತಂದಂತೆ, ರಾಜ್ಯದಲ್ಲಿ ಇಂತಹ ಹುನ್ನಾರ ನಡೆಸಲು ಶಾ ರಣತಂತ್ರ ರೂಪಿಸಿದ್ದಾರೆ. ಆದರೆ. ಇಂತಹ ತಂತ್ರಗಳೆಲ್ಲಾ ಇಲ್ಲಿ ನಡೆಯೋಲ್ಲ ಎಂದು ಗುಡುಗಿದರು.
 
ಒಕ್ಕಲಿಗರು ನಮ್ಮ ಜತೆಯಲ್ಲಿ ಇಲ್ಲ ಅನ್ನೋ ಕಾರಣಕ್ಕೆ ಅಮಿತ್  ಶಾ, ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ.ಆದರೆ, ಒಕ್ಕಲಿಗರು ಈಗಾಗಲೇ ಯಾವ ಪಕ್ಷಕ್ಕೆ ಮತ ನೀಡಬೇಕು ಎನ್ನುವುದನ್ನು ತೀರ್ಮಾನಿಸಿದ್ದಾರೆ ಎಂದು ತಿರುಗೇಟು ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments