Publish Date: Thu, 31 Mar 2022 (12:02 IST)
Updated Date: Thu, 31 Mar 2022 (14:01 IST)
ಚಿಕ್ಕಬಳ್ಳಾಪುರ : ಇಂದು ರಾಜ್ಯಕ್ಕೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಏಪ್ರಿಲ್ 1ರಂದು ನಾಳೆ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಬಳಿಯ ಶ್ರೀ ಸತ್ಯಸಾಯಿ ಲೋಕಸೇವಾ ಶಿಕ್ಷಣ ಸಂಸ್ಥೆಗಳ ಸತ್ಯಸಾಯಿ ಗ್ರಾಮಕ್ಕೆ ಭೇಟಿ ನೀಡಿಲಿದ್ದು,
ಅಮಿತ್ ಶಾ ಆಗಮನಕ್ಕಾಗಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸತ್ಯಸಾಯಿ ಗ್ರಾಮದ ಸರಳ ಮೆಮೋರಿಯಲ್ ಆಸ್ಪತ್ರೆಯ ಪಕ್ಕದಲ್ಲಿಯೇ 400 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ ಹಾಗೂ ಉಚಿತ ವೈದ್ಯಕೀಯ ಶಿಕ್ಷಣಕ್ಕೆ ನೆರವಾಗುವ ನೂತನ ಕಟ್ಟಡ ನಿರ್ಮಾಣಕ್ಕೆ ಅಮಿತ್ ಶಾ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ.
ತುಮಕೂರು ಸಿದ್ದಗಂಗಾ ಮಠದಲ್ಲಿ ಕಾರ್ಯಕ್ರಮ ಮುಗಿಸಿ ಶ್ರೀ ಸತ್ಯಸಾಯಿ ಗ್ರಾಮದ ಕ್ರೀಡಾಂಗಣಕ್ಕೆ ವಿಶೇಷ ಹೆಲಿಕಾಪ್ಟರ್ ಮೂಲಕ 2 ಗಂಟೆ 15 ನಿಮಿಷಕ್ಕೆ ಅಮಿತ್ ಶಾ ಅವರು ಆಗಮಿಸಲಿದ್ದು,
ಸತ್ಯಸಾಯಿ ಸಂಸ್ಥೆಗಳ ಸದ್ಗುರು ಮಧುಸೂದನ್ ಸಾಯಿಯವರೊಡನೆ 400 ಹಾಸಿಗೆಗಳ ಆಸ್ಪತ್ರೆಗೆ ಭೂಮಿ ಪೂಜೆ ನೇರವೇರಿಸಲಿದ್ದಾರೆ. ಕಾರ್ಯಕ್ರಮ ಮುಗಿದ ನಂತರ 3.15 ನಿಮಿಷಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.