Select Your Language

Notifications

webdunia
webdunia
webdunia
webdunia

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಮಂಗಳೂರಿಗೆ!

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಮಂಗಳೂರಿಗೆ!
ಮಂಗಳೂರು , ಸೋಮವಾರ, 19 ಫೆಬ್ರವರಿ 2018 (07:20 IST)
ಮಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಪ್ರಚಾರಕ್ಕಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಸೋಮವಾರ (ಇಂದು) ಮಂಗಳೂರಿಗೆ ಆಗಮಿಸಲಿದ್ದಾರೆ.


ಸೋಮವಾರ ಸಂಜೆ 5.30ಕ್ಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನಂತರ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬೆಳಗ್ಗೆ ಅಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು  ನಂತರ ಕುಲ್ಕುಂದದಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ನವಶಕ್ತಿ ಸಂಗಮದಲ್ಲಿ ಮಾತನಾಡಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಮಧ್ಯಾಹ್ನ ಇತ್ತೀಚಿಗೆ ದುರ್ಷ್ಕಮಿಗಳಿಂದ ಕೊಲೆಯಾದ ಬಿಜೆಪಿ ಕಾರ್ಯಕರ್ತ ಸುರತ್ಕಲ್ ನ ಕಾಟಿಪಳ್ಳ  ದೀಪಕ್ ರಾವ್ ಅವರ ಮನೆಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಚಹಾ, ಪಕೋಡಾ ಚರ್ಚೆಗೆ ಬಿಜೆಪಿ ಸೀಮಿತ– ಅಖಿಲೇಶ್ ಯಾದವ್