Webdunia - Bharat's app for daily news and videos

Install App

ಕಾದಿದೆ ನಿಮಗೆ ಗ್ರಹಚಾರ! ಬಿಜೆಪಿ ನಾಯಕರಿಗೆ ಬೆಂಡೆತ್ತಿದ ಅಮಿತ್ ಶಾ!

Webdunia
ಶುಕ್ರವಾರ, 3 ನವೆಂಬರ್ 2017 (09:04 IST)
ಬೆಂಗಳೂರು: ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಜನರೇ ಇಲ್ಲದಿರುವುದನ್ನು ನೋಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೆಂಡಾಮಂಡಲರಾಗಿದ್ದಾರೆ.

 
ನಿನ್ನೆ ತುಮಕೂರು ರಸ್ತೆಯ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಆವರಣದಲ್ಲಿ ಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ಜನರು ಆಸೀನರಾಗಿರುವುದಕ್ಕಿಂತ ಖಾಲಿ ಕುರ್ಚಿಗಳೇ ಎದ್ದು ಕಾಣುತ್ತಿತ್ತು.

ಕೆಲವು ಬಿಜೆಪಿ ನಾಯಕರು ಅಲ್ಲಲ್ಲಿ ಚದುರಿದ್ದ ಜನರನ್ನು ಕುರ್ಚಿಯಲ್ಲಿ ಕುಳ್ಳಿರಿಸಲು ಪ್ರಯತ್ನ ನಡೆಸಿದ್ದೂ ಆಯ್ತು. ಬಿಎಸ್ ಯಡಿಯೂರಪ್ಪ ತಮ್ಮ ಭಾಷಣದಲ್ಲಿ ದಯಮಾಡಿ ಅರ್ಧಗಂಟೆ ಕುಳಿತುಕೊಳ್ಳಿ ಎಂದು ಮನವಿ ಮಾಡಬೇಕಾಗಿ ಬಂತು.

ಇದೆಲ್ಲದರ ನಡುವೆ ಕೆಲವು ಬಿಜೆಪಿ ನಾಯಕರು ಮಾತ್ರ ತಮಗೂ ಇದಕ್ಕೂ ಸಂಬಂಧವೇ ಇಲ್ಲದವರಂತೆ ಕುಳಿತಿದ್ದರು. ಇದು ಅಮಿತ್ ಶಾ ಕೆಂಗಣ್ಣಿಗೆ ಗುರಿಯಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಯಾರ ಜತೆಗೂ ಮಾತನಾಡದೇ ಸೀದಾ ದೆಹಲಿಗೆ ತೆರಳಿದ ಶಾ, ನಂತರ ದೂರವಾಣಿ ಮುಖಾಂತರ ರಾಜ್ಯ ನಾಯಕರನ್ನು ಸಂಪರ್ಕಿಸಿ  ಭಿನ್ನಮತ ಮರೆತು ಒಗ್ಗಟ್ಟಾಗಿ ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ತಕ್ಕ ಪರಿಣಾಮ ಎದುರಿಸಬೇಕಾದೀತು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ಮುಂದಿನ ಸುದ್ದಿ
Show comments